ಹಿಜಾಬ್, ಜನಿವಾರ, ಶಿವದಾರ ಧರಿಸಲು ಅನುಮತಿ ನೀಡಿದ ಸರ್ಕಾರ! ಪರೀಕ್ಷೆಯಲ್ಲಿ ಇನ್ನು ಧಾರ್ಮಿಕ ಪದ್ಧತಿಗೆ ಮುಕ್ತ ಅವಕಾಶ

ಬೆಂಗಳೂರು: ರಾಜ್ಯದ ಶೈಕ್ಷಣಿಕ (Education) ಕ್ಷೇತ್ರದಲ್ಲಿ ಹಲವು ದಿನಗಳಿಂದ ಚರ್ಚೆಯಲ್ಲಿದ್ದ ಧಾರ್ಮಿಕ ಪದ್ಧತಿಗಳ ಪಾಲನೆಗೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. ಇನ್ನು ಮುಂದೆ ಪರೀಕ್ಷಾ ಸಮಯದಲ್ಲಿ ವಿದ್ಯಾರ್ಥಿಗಳು ತಮ್ಮ ಸಂಪ್ರದಾಯದಂತೆ ಜನಿವಾರ, ಶಿವದಾರ, ಪೇಟಾ, ಹಿಜಾಬ್ ಹಾಗೂ ಸ್ಕಾರ್ಫ್ ಸೇರಿದಂತೆ ವಿವಿಧ ಧಾರ್ಮಿಕ ಪದ್ಧತಿಗಳನ್ನು ಅನುಸರಿಸಲು ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಅವರು ಪ್ರಕಟಿಸಿದ್ದಾರೆ. WhatsApp Group Join Now ಬೆಂಗಳೂರಿನ ಸಮಗ್ರ ಶಿಕ್ಷಣ ಇಲಾಖೆಯಲ್ಲಿ ಆರೋಗ್ಯ … Read more

“ಬೆಂಗಳೂರು ಅಭಿವೃದ್ಧಿ ವಿಚಾರದಲ್ಲಿ ಈ ಹುಚ್ಚುತನ ಬಿಡಿ” : ಡಿ.ಕೆ ಶಿವಕುಮಾರ್‌ಗೆ ಸಂಸದ ತೇಜಸ್ವಿ ಸೂರ್ಯ ಚಾಟಿ

ಸಂಸದ ತೇಜಸ್ವಿ ಸೂರ್ಯ ಅವರು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕಾರ್ಯ ವೈಖರಿಯನ್ನು ಟೀಕಿಸಿದ್ದಾರೆ. ಈಚೆಗಷ್ಟೇ ಕುಟುಂಬಕ್ಕಿಂತಲೂ ಸಾರ್ವಜನಿಕ ಜೀವನದ ಬಗ್ಗೆ ಹೆಚ್ಚು ಗಮನ ನೀಡಿದ್ದಾರೆ ಎನ್ನುವ ವಿಚಾರಕ್ಕೆ ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರ ಬಗ್ಗೆ ಮೆಚ್ಚುಗೆ ಸೂಚಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇದೀಗ ಬೆಂಗಳೂರಿನ ಪ್ರಮುಖ ಯೋಜನೆ ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. WhatsApp Group Join Now ಬೆಂಗಳೂರು ನಗರಕ್ಕೆ ದುರಸ್ತಿ … Read more

ಅರಸನ ಅರಮನೆಗೆ ಗ್ರಹಣ ಪಟ್ಟದ ಆನೆಗೆ ಸಂಕಷ್ಟ: ರಾಜಕೀಯ ಸಂಚಲನ ಮೂಡಿಸಿದ ಕೋಡಿಶ್ರೀಗಳ ಸ್ಫೋಟಕ ಭವಿಷ್ಯವಾಣಿ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜಡೆ ಸಂಸ್ಥಾನ ಮಠದಲ್ಲಿ ಭಕ್ತರನ್ನು ಉದ್ದೇಶಿಸಿ ಮಾತನಾಡಿದ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು ಮುಂದಿನ ದಿನಗಳ ಬಗ್ಗೆ ಆತಂಕಕಾರಿ ಹಾಗೂ ಕುತೂಹಲಕಾರಿ ಭವಿಷ್ಯ ನುಡಿದಿದ್ದಾರೆ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಅನಿರೀಕ್ಷಿತ ಹವಾಮಾನ ಏರುಪೇರುಗಳಿಂದಾಗಿ ಜಗತ್ತು ಸಂಕಷ್ಟಕ್ಕೆ ಸಿಲುಕಲಿದೆ ಎಂದು ಅವರು ಎಚ್ಚರಿಸಿದ್ದಾರೆ. WhatsApp Group Join Now ಪ್ರಕೃತಿ ವಿಕೋಪದ ಎಚ್ಚರಿಕೆ ಮುಂದಿನ ದಿನಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಮಳೆಯ ಆರ್ಭಟ ವಿಪರೀತವಾಗಲಿದ್ದು, ಇದರಿಂದ ಭೂಮಿ … Read more

NEET UG: ನೀಟ್ ಪೇಪರ್ 10 ಲಕ್ಷಕ್ಕೆ ಖರೀದಿ, 15 ಲಕ್ಷಕ್ಕೆ ಸೇಲ್!‌ : ಆರೋಪಿ ಶುಭಂ ಅಸಲಿಗೆ ಯಾರು?

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ನೀಟ್ (NEET UG 2026) ಪರೀಕ್ಷಾ ಅಕ್ರಮದ (Question Paper Leak) ತನಿಖೆ ಚುರುಕುಗೊಂಡಿದ್ದು, ಸಿಬಿಐ (CBI) ಈಗ ಮಹಾರಾಷ್ಟ್ರದ ನಾಸಿಕ್‌ನಲ್ಲಿ 30 ವರ್ಷದ ಬಿಎಎಂಎಸ್ (BAMS) ವಿದ್ಯಾರ್ಥಿ ಶುಭಂ ಖೈರ್ನಾರ್‌ನನ್ನು ಅಧಿಕೃತವಾಗಿ ವಶಕ್ಕೆ ಪಡೆದಿದೆ. WhatsApp Group Join Now ನಾಸಿಕ್ ಜಿಲ್ಲೆಯ ನಂದಗಾಂವ್ ಮೂಲದವನಾದ ಶುಭಂ, ಸದ್ಯ ಕುಟುಂಬದೊಂದಿಗೆ ನಾಸಿಕ್‌ನ ಇಂದಿರಾನಗರದಲ್ಲಿ ವಾಸವಿದ್ದ. ಆಯುರ್ವೇದ ವೈದ್ಯಕೀಯ (BAMS) ವಿದ್ಯಾರ್ಥಿಯಾದ ಈತ, ಪರೀಕ್ಷಾ ಅಕ್ರಮದ ಜಾಲದಲ್ಲಿ ಮಧ್ಯವರ್ತಿಯಾಗಿ ಕೆಲಸ ಮಾಡಿದ್ದ. … Read more

ಸಾರ್.‌ ನನ್ನ ಹೆಂಡತಿ ಮದುವೆಯನ್ನು ತಪ್ಪಿಸಿ..! ಬೆಳಗಾವಿಯಲ್ಲಿ ಪತಿಯ ಗೋಳಾಟ!

ಪರಸ್ಪರ ಒಪ್ಪಿಗೆಯಿಂದ ಮದುವೆಯಾದ ಪತ್ನಿಯನ್ನು ಆಕೆಯ ಮನೆಯವರೇ ಕೂಡಿಹಾಕಿ, ಇದೀಗ ಮತ್ತೊಬ್ಬರ ಜೊತೆ ಮದುವೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಬೆಳಗಾವಿ ಜಿಲ್ಲೆಯ ಹಿರೆಬಾಗೇವಾಡಿಯಲ್ಲಿ ವೆಂಕಟೇಶ್ವರ ರಾಠೋಡ್ ಎಂಬುವವರು ಗಂಭೀರ ಆರೋಪ ಮಾಡಿದ್ದಾರೆ. WhatsApp Group Join Now ಇದು 2016 ಲವ್‌ ಸ್ಟೋರಿ ಸುದ್ದಿಗಾರರೊಂದಿಗೆ ಮಾತನಾಡಿದ ವೆಂಕಟೇಶ್ವರ ರಾಠೋಡ್, “ನನಗೆ ಮಂಜುಳಾ ಹಂಚಿನಮನಿ ಎಂಬಾಕೆಯ ಪರಿಚಯ 2016ರಿಂದಲೇ ಇತ್ತು. ಆಕೆಯನ್ನು ನಾನು 2022ರಲ್ಲಿ ಮದುವೆಯಾಗಿದ್ದೇನೆ. ಆದರೆ ಈಗ ಆಕೆಯ ತಂದೆ ಹಿರೆಬಾಗೇವಾಡಿಯ ರುದ್ರಪ್ಪ ಹಂಚಿನಮನಿ ಹಾಗೂ … Read more

ಮುಂದಿನ 3 ದಿನ ರಾಜ್ಯದ ಈ 8 ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಆಲಿಕಲ್ಲು ಮಳೆ : ಕರಾವಳಿ ಜನರೇ ಎಚ್ಚರ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ. WhatsApp Group Join Now ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ … Read more

ಒಬ್ಬ ಮುಸಲ್ಮಾನನ ಮೇಲೆ ಕೈ ಇಟ್ಟರೂ ನಾವು ನಿಮ್ಮನ್ನು ಕೊಲ್ಲುತ್ತೇವೆ: ಕೊಲೆ ಬೆದರಿಕೆ ಹಾಕಿದ ಶಾಸಕ ಹುಮಾಯೂನ್ ಕಬೀರ್

ಪಶ್ಚಿಮ ಬಂಗಾಳದ ರಾಜಕೀಯ ವಲಯದಲ್ಲಿ ಈಗ ದೊಡ್ಡ ಸಂಚಲನ ಸೃಷ್ಟಿಯಾಗಿದೆ. ಮುರ್ಷಿದಾಬಾದ್ ಜಿಲ್ಲೆಯ ಭರತ್ ಪುರ ಕ್ಷೇತ್ರದ ಶಾಸಕ ಹುಮಾಯೂನ್ ಕಬೀರ್ ಅವರು ಪಶ್ಚಿಮ ಬಂಗಾಳದ ಪ್ರಮುಖ ನಾಯಕ ಶುಭೇಂದು ಅಧಿಕಾರಿ ಅವರಿಗೆ ನೇರವಾದ ಕೊಲೆ ಬೆದರಿಕೆ ಹಾಕುವ ಮೂಲಕ ವಿವಾದದ ಕಿಚ್ಚು ಹಚ್ಚಿದ್ದಾರೆ. WhatsApp Group Join Now ಬಾಂಗ್ಲಾದೇಶದ ಫೇಸ್ ದ ಪೀಪಲ್ ಎಂಬ ಸುದ್ದಿ ವಾಹಿನಿಗೆ ನೀಡಿದ ಪ್ರಚೋದನಾಕಾರಿ ಸಂದರ್ಶನದಲ್ಲಿ ಈ ಆಘಾತಕಾರಿ ಹೇಳಿಕೆ ಹೊರಬಿದ್ದಿದೆ. ಈ ಸಂದರ್ಶನದ ವೇಳೆ ಅತ್ಯಂತ ತೀಕ್ಷ್ಣವಾಗಿ … Read more

ವೈದ್ಯರ ನಿರ್ಲಕ್ಷ್ಯದಿಂದ ಕಣ್ಣುಗಳಿಲ್ಲದೆ ಜನಿಸಿದ ಮಗು ! ಆಸ್ಪತ್ರೆಗೆ 1 ಕೋಟಿ ರೂ. ದಂಡ ವಿಧಿಸಿದ ಕೋರ್ಟ್.!

ವೈದ್ಯರ ನಿರ್ಲಕ್ಷ್ಯದಿಂದಾಗಿ ಸಂಕಷ್ಟಕ್ಕೀಡಾದ ಕುಟುಂಬವೊಂದಕ್ಕೆ 1 ಕೋಟಿ ರೂಪಾಯಿ ಬೃಹತ್ ಪರಿಹಾರ ನೀಡುವಂತೆ ಆದಿಲಾಬಾದ್ ಜಿಲ್ಲಾ ಗ್ರಾಹಕರ ನ್ಯಾಯಾಲಯವು ಐತಿಹಾಸಿಕ ತೀರ್ಪು ನೀಡಿದೆ. ಗರ್ಭಿಣಿಯಾಗಿದ್ದ ಅವಧಿಯಲ್ಲಿ ಅಲ್ಟ್ರಾಸೌಂಡ್ ಸ್ಕ್ಯಾನಿಂಗ್ ಮಾಡಿದಾಗ, ಹುಟ್ಟಲಿರುವ ಮಗುವಿಗೆ ಕಣ್ಣುಗಳಿಲ್ಲ ಎಂಬ ವಿಷಯವನ್ನು ಪತ್ತೆಹಚ್ಚುವಲ್ಲಿ ವೈದ್ಯರು ವಿಫಲರಾದ ಹಿನ್ನೆಲೆಯಲ್ಲಿ ಈ ತೀರ್ಪು ಹೊರಬಿದ್ದಿದೆ. WhatsApp Group Join Now ಈ ಭಾರಿ ಪರಿಹಾರದೊಂದಿಗೆ ದೂರು ದಾಖಲಿಸಿದ ದಿನಾಂಕದಿಂದ ಶೇ. 12 ರಷ್ಟು ಬಡ್ಡಿ ನೀಡುವಂತೆ ನ್ಯಾಯಾಲಯವು ಆಸ್ಪತ್ರೆಗೆ ಆದೇಶಿಸಿದೆ. ಘಟನೆಯ ವಿವರ ತೆಲಂಗಾಣದ … Read more

ಟ್ರೆಕ್ಕಿಂಗ್‌ ಪ್ರಿಯರಿಗೆ ಸರ್ಕಾರ ಶಾಕ್‌..! ರಾಜ್ಯಾದ್ಯಂತ ಚಾರಣ ಬ್ಯಾನ್ ಮಾಡಿದ ಸರ್ಕಾರ.. ಕಾರಣವೇನು ಗೊತ್ತೆ.?

ಕಳೆದ ಮೇ 10ರಂದು ನಾಗಮಲೆ ಅರಣ್ಯ ಪ್ರದೇಶದಲ್ಲಿ ಚಿರತೆಯೊಂದು ಅನಿರೀಕ್ಷಿತವಾಗಿ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 10 ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದನು. ಈ ಘಟನೆಯು ಸ್ಥಳೀಯ ನಿವಾಸಿಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದಲ್ಲದೆ, ಪ್ರವಾಸಿಗರು ಮತ್ತು ಚಾರಣಿಗರ ಸುರಕ್ಷತೆಯ ಬಗ್ಗೆ ದೊಡ್ಡ ಮಟ್ಟದ ಚರ್ಚೆಯನ್ನು ಹುಟ್ಟುಹಾಕಿತ್ತು. WhatsApp Group Join Now ಅರಣ್ಯ ಪ್ರದೇಶಗಳಲ್ಲಿ ಜನರ ಮುಕ್ತ ಸಂಚಾರವು ಇಂತಹ ಅನಾಹುತಗಳಿಗೆ ಕಾರಣವಾಗುತ್ತಿದೆಯೇ ಎಂಬ ಪ್ರಶ್ನೆ ಎದ್ದಿತ್ತು. ಹೌದು.. ಘಟನೆಯ ಗಂಭೀರತೆಯನ್ನು ಮನಗಂಡ ಅರಣ್ಯ, ಜೀವಿಶಾಸ್ತ್ರ … Read more

ಸನಾತನ ಧರ್ಮ ನಾಶ : ಸದನದಲ್ಲಿ ಉದಯನಿಧಿ ಗುಡುಗು, ಮೌನವಹಿಸಿ ಸಮ್ಮತಿಸಿದ್ರಾ ಸಿಎಂ ವಿಜಯ್

ವಿಧಾನಸಭೆಯ ಮೊದಲ ಕಲಾಪದಲ್ಲೇ ಉಭಯ ನಾಯಕರ ನಡುವೆ ಗದ್ದಲದ ಮುನ್ಸೂಚನೆ ಸಿಕ್ಕಿದೆ. ವಿಜಯ್ ಅವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ತಮಿಳು ನಾಡಗೀತೆಗಿಂತ ಮೊದಲು ‘ವಂದೇ ಮಾತರಂ’ ನುಡಿಸಿದ್ದನ್ನು ಉದಯನಿಧಿ ಕಟುವಾಗಿ ಟೀಕಿಸಿದರು. WhatsApp Group Join Now ನಮ್ಮ ತಮಿಳುನಾಡು ರಾಜ್ಯ ಗೀತೆಯನ್ನು ಎಂದಿಗೂ ಎರಡನೇ ಸ್ಥಾನಕ್ಕೆ ತಳ್ಳಬಾರದು. ಪಶ್ಚಿಮ ಬಂಗಾಳದಂತಹ ರಾಜ್ಯಗಳಲ್ಲೇ ಇಂತಹ ಸಂಪ್ರದಾಯವಿಲ್ಲ. ತಮಿಳು ಸಂಸ್ಕೃತಿಗೆ ಧಕ್ಕೆ ತರುವ ಇಂತಹ ನಡೆಗಳು ಮರುಕಳಿಸಬಾರದು.. ಎಂದು ಉದಯನಿಧಿ ಎಚ್ಚರಿಸಿದರು. ಸನಾತನ ಧರ್ಮದ ಹೇಳಿಕೆ ಮತ್ತು ವಿಜಯ್ … Read more