ಕಾಲೇಜು ವಿದ್ಯಾರ್ಥಿಗಳ ಪ್ರವಾಸದ ಬಸ್‌ ಪಲ್ಟಿ – ಚಾಲಕನ ನಿರ್ಲಕ್ಷ್ಯ.! :12 ಮಂದಿಗೆ ಗಂಭೀರ ಗಾಯ

ಶಿರಸಿ: ತಾಲ್ಲೂಕಿನ ಮತ್ತಿಘಟ್ಟ ಸಮೀಪದ ಹಸೆಮನೆ ತಿರುವಿನಲ್ಲಿ ಪ್ರವಾಸಕ್ಕೆಂದು ಹೊರಟಿದ್ದ ವಿದ್ಯಾರ್ಥಿಗಳನ್ನು ತುಂಬಿದ್ದ ಬಸ್ ಪಲ್ಟಿಯಾಗಿದ್ದು, 12 ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ. WhatsApp Group Join Now ದಾವಣಗೆರೆಯ ಜೈನ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳುತ್ತಿದ್ದರು. ಘಟನೆಯಲ್ಲಿ 12 ವಿದ್ಯಾರ್ಥಿಗಳು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಅಂಕೋಲಾ ಹಾಗೂ ಶಿರಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಡಿ.28ರಂದು ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳು ಮಂಗಳವಾರ ಬೆಳಿಗ್ಗೆ ಶಿರಸಿ ಮಾರಿಕಾಂಬಾ ದೇವಾಲಯಕ್ಕೆ ಬಂದು, ಅಲ್ಲಿಂದ ಯಾಣ … Read more

ವಿಧ್ಯಾರ್ಥಿ ಬೈಕ್ ಕದ್ದ ಕಳ್ಳನನ್ನು ಅರೆಸ್ಟ್ ಮಾಡಿ ವಿಚಾರಿಸಿದ ವೇಳೆ ಹೊರಬಿತ್ತು ಮತ್ತಷ್ಟು ಕಳ್ಳತನದ ಕಥೆ

ಶಿರ್ವ: ಕಾಲೇಜು ವಿದ್ಯಾರ್ಥಿಯೊಬ್ಬರ ಬೈಕ್ ಕಳವು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಶಿರ್ವ ಪೊಲೀಸರು, ಕ್ಷಿಪ್ರ ಕಾರ್ಯಾಚರಣೆ ನಡೆಸಿ ಓರ್ವ ಅಂತರ್ ಜಿಲ್ಲಾ ಬೈಕ್ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. WhatsApp Group Join Now ಬಂಧಿತನಿಂದ ಸುಮಾರು 5 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಆರೋಪಿ ಓಂ ಕೋಲಾರ ಎಂದು ಗುರುತಿಸಲಾಗಿದೆ. ಪ್ರಕರಣದ ಹಿನ್ನೆಲೆ : ಡಿ. 5 ರಂದು ವಿದ್ಯಾರ್ಥಿ ಕೌಶಿಕ್ ತನ್ನ ಹೊಂಡಾ ಆಕ್ಟಿವಾ ಸ್ಕೂಟರ್‌ನಲ್ಲಿ ಮಧ್ಯಾಹ್ನ 12:45ರ ಸುಮಾರಿಗೆ ಊಟಕ್ಕಾಗಿ … Read more

ಪೀರಿಯಡ್ಸ್ ಸಮಯದಲ್ಲೂ ಸೆ* ಗೆ ಒತ್ತಾಯ, ಅಶ್ಲೀಲ ವಿಡಿಯೋ ನೋಡಿ ಲೈಂಗಿಕ ಕಿರುಕುಳ..: ಪತಿ ವಿರುದ್ಧ ಪತ್ನಿ ದೂರು!

ಪ್ರತಿನಿತ್ಯ ಲೈಂಗಿಕ ಕ್ರಿಯೆಗೆ ಒತ್ತಾಯಿಸಿ ಕಿರುಕುಳ ನೀಡುತ್ತಿದ್ದ ಸೈಕೋ ಪತಿಯ ವಿರುದ್ಧ ಆತನ ಪತ್ನಿಯೇ ಪೊಲೀಸ್ ದೂರು ನೀಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. WhatsApp Group Join Now ಮದುವೆಯಾದ ಮೂರೇ ತಿಂಗಳಲ್ಲಿ ಪತಿಯ ಕಾಟಕ್ಕೆ ಬೆಚ್ಚಿಬಿದ್ದಿರುವ ಮಹಿಳೆ ಆತನ ಅಶ್ಲೀಲ ಹಾಗೂ ಅಸಹಜ ವರ್ತನೆ ವಿರೋಧಿಸಿ ಕೊನೆಗೂ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಪ್ರಕರಣ ದಾಖಲಿಸಿದ್ದಾರೆ. ವಯಸ್ಸು ಮುಚ್ಚಿಟ್ಟು ಮದುವೆಯಾದ ಪತಿ, ಲೈಂಗಿಕ ಕಿರುಕುಳ ನೀಡಿ, ಅಶ್ಲೀಲ ವಿಡಿಯೋ ತೋರಿಸಿ ಅದೇ ರೀತಿ ಮಾಡಲು ಒತ್ತಾಯಿಸುತ್ತಿದ್ದ. … Read more

ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ.?

ರಾತ್ರಿ ಬೇಗ ಮಲಗಿ ಬೆಳಗ್ಗೆ ಬೇಗ ಏಳಬೇಕು ಎನ್ನುವ ನಿಯಮವನ್ನು ಬಹಳ ಹಿಂದಿನಿಂದಲೂ ನಮ್ಮ ಹಿರಿಯರು ಅನುಸರಿಸಿಕೊಂಡು ಬಂದಿದ್ದಾರೆ. ಈ ಅಭ್ಯಾಸ ದೈಹಿಕ, ಮಾನಸಿಕ ಆರೋಗ್ಯಕ್ಕೆ ಮಾತ್ರವಲ್ಲ ಇತರೆ ಕೆಲಸಕ್ಕೂ ತುಂಬಾನೇ ಒಳ್ಳೆಯದು. ಅದರಲ್ಲೂ ಬ್ರಹ್ಮ ಮುಹೂರ್ತದಲ್ಲಿ ಏಳುವುದರಿಂದ ಪ್ರಯೋಜನಗಳು ಇನ್ನೂ ಹೆಚ್ಚಂತೆ. WhatsApp Group Join Now ಹಿಂದೂ ಧರ್ಮದಲ್ಲಿ ಬ್ರಹ್ಮ ಮುಹೂರ್ತವನ್ನು ಅತ್ಯಂತ ಶುಭವೆಂದು ಪರಿಗಣಿಸಲಾಗಿದೆ. ಬೆಳಿಗ್ಗೆ 4:00 ರಿಂದ 5:30 ರವರೆಗಿನ ಸಮಯವನ್ನು ಬ್ರಹ್ಮ ಮುಹೂರ್ತ ಪರಿಗಣಿಸಲಾಗುತ್ತದೆ. ಈ ಸಮಯದಲ್ಲಿ ಏಳುವುದರಿಂದ ಶಕ್ತಿ, … Read more

ನಿದ್ರೆಯಲ್ಲಿದ್ದ ಯುವತಿಯ ಎದೆ ಸ್ಪರ್ಶಿಸಿದ ಕಾಮುಕ, ಚಲಿಸುತ್ತಿದ್ದ ಬಸ್ ನಲ್ಲಿ ಲೈಂಗಿಕ ಕಿರುಕುಳ

ಸಾರ್ವಜನಿಕ ಸಾರಿಗೆಯಲ್ಲೂ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದ್ದು, ಚಲಿಸುವ ಬಸ್‌ನಲ್ಲಿ ನಿದ್ದೆ ಮಾಡುತ್ತಿದ್ದ ಯುವತಿಯೊಬ್ಬಳಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. WhatsApp Group Join Now ಕಾಮುಕನ ಈ ನೀಚ ಕೃತ್ಯವನ್ನು ಎದೆಗುಂದದೆ ವಿಡಿಯೋ ಮಾಡಿದ ಯುವತಿ, ಆತನ ಮುಖವಾಡವನ್ನು ಸೋಷಿಯಲ್ ಮೀಡಿಯಾದಲ್ಲಿ ಬಯಲು ಮಾಡಿದ್ದಾರೆ. ಘಟನೆಯ ವಿವರ ಬಾಧಿತ ಯುವತಿ ಕಾರವಾರದಿಂದ ಅಂಕೋಲಾ ಕಡೆಗೆ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದರು. ಸುದೀರ್ಘ ಪ್ರಯಾಣದ ಆಯಾಸದಿಂದ ಯುವತಿ ಸೀಟಿನಲ್ಲಿ ನಿದ್ದೆಗೆ … Read more

ಮಲವಿಸರ್ಜನೆಯ ವೇಳೆ ಈ ಲಕ್ಷಣಗಳು ಕಂಡುಬಂದ್ರೆ ಅದು ಕ್ಯಾನ್ಸರ್ ಎಂದರ್ಥ…

ಕೊಲೊರೆಕ್ಟಲ್ ಕ್ಯಾನ್ಸರ್ ಒಂದು ಅಪಾಯಕಾರಿ ಕ್ಯಾನ್ಸರ್ ಆಗಿದ್ದು, ಇದು ಕರುಳು (ಕೊಲೊನ್) ಅಥವಾ ಗುದನಾಳದಲ್ಲಿ ಕಂಡುಬರುತ್ತದೆ. ಇದು ವಿಶ್ವದಾದ್ಯಂತ ಅತ್ಯಂತ ಮಾರಕ ಕ್ಯಾನ್ಸರ್‌ಗಳಲ್ಲಿ ಒಂದೆಂದು ಗುರುತಿಸಲ್ಪಟ್ಟಿದೆ. ಇದರ ಲಕ್ಷಣಗಳು ಸಾಮಾನ್ಯ ಸಮಸ್ಯೆಯಂತೆ ಕಂಡುಬರುವುದರಿಂದ ಅನೇಕರು ಇದನ್ನ ಮೊದಲಿಗೆ ಗುರುತಿಸುವುದಿಲ್ಲ. WhatsApp Group Join Now ಹಿಂದೆ ಇದು ಹೆಚ್ಚಾಗಿ ವಯಸ್ಸಾದವರಲ್ಲಿ ಕಂಡುಬಂದಿತ್ತು. ಆದರೆ ಈಗ ಈ ಕ್ಯಾನ್ಸರ್ ಪ್ರಕರಣಗಳು ಯುವಜನರಲ್ಲಿಯೂ ಹೆಚ್ಚುತ್ತಿವೆ. ಅನೇಕ ಜನರಲ್ಲಿ ಇದು ತಡವಾದ ಹಂತದಲ್ಲಿ ಪತ್ತೆಯಾಗುತ್ತದೆ ಎಂಬುದು ಆತಂಕಕಾರಿ ಸಂಗತಿ. ನೋವು ಇರುವುದಿಲ್ಲ … Read more

ಮಗನ ಅಂತರ್ಜಾತಿ ವಿವಾಹವೇ ಪ್ರಾಣಕ್ಕೆ ಮುಳುವಾಯ್ತು : ಉಮೇಶನ ಕೊಲೆಗೈದ ದಂಪತಿ ಪೊಲೀಸರಿಗೆ ಶರಣು.!

ಹಳೇ ವೈಷಮ್ಯ ಹಾಗೂ ಮಗನ ಅಂತರ್ಜಾತಿ ವಿವಾಹದ ವಿಚಾರವಾಗಿ ನಡೆದ ಗಲಾಟೆ ಬರ್ಬರ ಹತ್ಯೆಯಲ್ಲಿ ಅಂತ್ಯವಾಗಿದ್ದು, ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿ ದಂಪತಿಗಳು ಈಗ ಪೊಲೀಸರ ಮುಂದೆ ಶರಣಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚೆನ್ನಿಪುರದದೊಡ್ಡಿ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಈ ಘಟನೆ ನಡೆದಿತ್ತು. WhatsApp Group Join Now ಘಟನೆಯ ಹಿನ್ನೆಲೆ ಕೊಲೆಯಾದ ವ್ಯಕ್ತಿಯನ್ನು ಉಮೇಶ್ ಎಂದು ಗುರುತಿಸಲಾಗಿದೆ. ಆರೋಪಿ ಸ್ವಾಮಿ ಎಂಬುವವರ ಮಗನಿಗೆ ಬೇರೆ ಜಾತಿಯ ಯುವತಿಯೊಂದಿಗೆ ವಿವಾಹ ಮಾಡಿಸಲು ಉಮೇಶ್ ಪ್ರಮುಖ … Read more

ಎಣ್ಣೆ ನಶೆಯಲ್ಲಿ ತಾಯಿಗೆ ಹೆದರಿಸಲು ಹೋದ ಮಗ ಹೆಣವಾದ.! ತಮಾಷೆಯಾಟಕ್ಕೆ ಬಲಿಯಾಯ್ತು ಯುವಕನ ಪ್ರಾಣ

ಮದ್ಯದ ನಶೆಯಲ್ಲಿ ತಾಯಿಯ ಜೊತೆ ತಮಾಷೆ ಮಾಡಲು ಹೋಗಿ ನೇಣಿಗೆ ಸಿಲುಕಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ರೋಹಿತ್ ನಗರದಲ್ಲಿ ನಡೆದಿದೆ. ವಿಜಯಕುಮಾರ್(28) ಮೃತ ದುರ್ದೈವಿಯಾಗಿದ್ದು, ಮಗನ ಹುಚ್ಚಾಟಕ್ಕೆ ತಾಯಿ ಹಾಗೂ ಸಂಬಂಧಿಕರು ಕಣ್ಣೀರಲ್ಲಿ ಕೈತೊಳೆಯುವಂತಾಗಿದೆ. WhatsApp Group Join Now ನಿನ್ನೆ ಸಂಜೆ ಮದ್ಯ ಸೇವಿಸಿ ಮನೆಗೆ ತೆರಳಿದ್ದ ವಿಜಯ್ ಕುಮಾರ್ ತಾಯಿ ಬಳಿ ಖರ್ಚಿಗೆ ಹಣ ನೀಡುವಂತೆ ಕೇಳಿದ್ದ. ಈ ವೇಳೆ ಆಕೆ ಕೊಡಲ್ಲ ಎಂದಿದ್ದಕ್ಕೆ ಆತ್ಮಹತ್ಯೆ ಮಾಡಿಕೊಳ್ತೀನಿ ಎಂದು … Read more

ಯುವಕನ ಕಿರಿಕಿರಿಗೆ ಬೇಸತ್ತು ಮಗನೊಂದಿಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆ: ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ

ಕೆಲಸದ ನೆಪದಲ್ಲಿ ಕಾಡುತ್ತಿದ್ದ ಯುವಕನ ಕಿರುಕುಳಕ್ಕೆ ಬೇಸತ್ತು, ಎಂಟು ವರ್ಷದ ಮಗನೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಕರುಣಾಜನಕ ಘಟನೆ ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದಲ್ಲಿ ನಡೆದಿದೆ. WhatsApp Group Join Now ಹಂಸರೇಖ ಎಂಬ ಮಹಿಳೆಯೇ ಆತ್ಮಹತ್ಯೆಗೆ ಶರಣಾದವರು. ಹಂಸರೇಖ ಅವರ ಪತಿ ನಾಗೇಶ್ ನಾಲ್ಕೈದು ವರ್ಷಗಳ ಹಿಂದೆ ನಿಧನರಾಗಿದ್ದರು. ಆಗಲೇ ಇಬ್ಬರು ಮಕ್ಕಳ ತಾಯಿಯಾಗಿದ್ದ ಹಂಸರೇಖ ಅವರ ಭವಿಷ್ಯ ಹಾಳಾಗಬಾರದು ಎಂಬ ಉದ್ದೇಶದಿಂದ ಕುಟುಂಬಸ್ಥರು ಪತಿಯ ಸಹೋದರನೊಂದಿಗೆ ಮರುವಿವಾಹ ಮಾಡಿಸಿದ್ದರು. ಬಳಿಕ ಜೀವನೋಪಾಯಕ್ಕಾಗಿ ವಸಂತನರಸಾಪುರದಲ್ಲಿರುವ ಖಾಸಗಿ … Read more

ಕೋಗಿಲು ಕೇಸ್‌ ನಡುವೆ ಕೇರಳ ಸಿಎಂ ಜೊತೆ ವೇದಿಕೆ ಹಂಚಿಕೊಂಡ ಸಿದ್ದು, ಸಿಎಂ ಭಾಷಣ ಕೇಳದೇ ಎದ್ದುಹೋದ ಪಿಣರಾಯಿ!

ಯಲಹಂಕದ ಕೋಗಿಲು ಲೇಔಟ್‌ ಕ್ರಾಸ್‌ನಲ್ಲಿನ ಅಕ್ರಮ ಗುಡಿಸಲುಗಳ ತೆರವು ಮಾಡಿದ ವಿಚಾರವನ್ನು ಕೇರಳ ಸಿಎಂ ಪಿಣರಾಯಿ ವಿಜಯನ್‌ ‘ಬುಲ್ಡೋಜರ್‌ ಕ್ರಮ’ ಎಂದು ಟೀಕೆ ಮಾಡಿದ್ದರು. ಇದರ ಬೆನ್ನಲ್ಲಿಯೇ ಈ ವಿಚಾರ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿತ್ತು. WhatsApp Group Join Now ಈ ವಿಚಾರ ನಡೆದು ಒಂದು ವಾರದ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಕೇರಳ ಸಿಎಂ ಪಿಣರಾಯಿ ವಿಜಯನ್‌ ಒಂದೇ ವೇದಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕೋಗಿಲು ಲೇಔಟ್‌ನ ಅಕ್ರಮ ಮನೆಗಳನ್ನು ತೆರವು ಮಾಡಿದ ವಿಚಾರ ದೊಡ್ಡದಾದ ಬಳಿಕ ಸಿಎಂ … Read more