Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ

ಮೇಷ ರಾಶಿ : WhatsApp Group Join Now ಪ್ರೇಮ ಸಂಬಂಧಗಳಲ್ಲಿ ವಿಶ್ವಾಸ ಹೆಚ್ಚಾಗಿ ಬಂಧ ಬಲವಾಗುತ್ತದೆ. ಧಾರ್ಮಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಸಮಯ ಸೂಕ್ತ. ವಿದೇಶದಲ್ಲಿ ಇರವ ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸುವರು. ನಿಮ್ಮದಾದ ಸ್ವತಂತ್ರ ಆದಾಯವನ್ನು ಇಟ್ಟುಕೊಳ್ಳಿ. ಖಾಸಗಿ ವೃತ್ತಿಯಲ್ಲಿ ಆದಾಯವನ್ನು ಹೆಚ್ಚಿಸಿಕೊಳ್ಳಲು ಮಾತನಾಡುವಿರಿ. ಶತ್ರುಗಳಿಗೆ ನೀವೇ ಕೇಂದ್ರಬಿಂದು ಆಗಿರಬಹುದು. ಸ್ಪರ್ಧಾತ್ಮಕವಾಗಿ ಚಟುವಟಿಕೆಗಳನ್ನು ಮಾಡಲು ಮನಸ್ಸು ಒಪ್ಪುವುದು. ವಿದ್ಯಾರ್ಥಿಗಳು ತಮ್ಮ ಕ್ಷೇತ್ರದಲ್ಲಿ ಯಶಸ್ಸನ್ನು ಗಳಿಸಲು ಬಹಳ ಪ್ರಯತ್ನಶೀಲರಾಗುವರು. ನಿಮಗೆ ತಾಳ್ಮೆಯೂ ಬಹಳ ಮುಖ್ಯವಾಗುವುದು. ನಿಮ್ಮ … Read more

ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ

ರಾಹುಲ್ ಗಾಂಧಿ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರದ ವಿರುದ್ಧ ಮತ ಕಳ್ಳತನದ ಆರೋಪ ಮಾಡಿದ್ದರು. ಈ ಕುರಿತು ಚರ್ಚೆಗೆ ಅವಕಾಶ ಕೋರಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭಾಷಣಕ್ಕೆ ಅಡ್ಡಿಪಡಿಸಿದರು. WhatsApp Group Join Now ಇದಾದ ನಂತರ ಅಮಿತ್ ಶಾ (Amit Shah) ಮತ್ತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡುವೆ ತೀವ್ರ ವಾಗ್ಸಮರ ಏರ್ಪಟ್ಟಿತು. ಲೋಕಸಭೆಯಲ್ಲಿ ಮಾತನಾಡಿದ ಅಮಿತ್ ಶಾ, ವಿಶೇಷ … Read more

40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!

‘ವಯಸ್ಸಾದರೂ ಯಂಗ್ ಆಗಿರುವುದು’ ಎಂದರೆ ಕೇವಲ ಹೆಚ್ಚು ಕಾಲ ಬದುಕುವುದು ಮಾತ್ರವಲ್ಲ, ಆರೋಗ್ಯಕರ ಚರ್ಮ, ಉತ್ತಮ ಶಕ್ತಿ ಮತ್ತು ಬಲವಾದ ರೋಗನಿರೋಧಕ ಶಕ್ತಿಯ ಮೂಲಕ ಯುವಕರಂತೆ ಕಾಣುವುದು ಮತ್ತು ಅನುಭವಿಸುವುದು. ಅನೇಕರಿಗೆ, ಈ ಆರೋಗ್ಯಕರ ವಯಸ್ಸಾಗುವಿಕೆಯ ಪ್ರಯಾಣವು ಅಡುಗೆಮನೆಯಿಂದಲೇ ಪ್ರಾರಂಭವಾಗುತ್ತದೆ. WhatsApp Group Join Now ‘ಫುಡ್-ಫಸ್ಟ್’ (ಆಹಾರವೇ ಮೊದಲು) ವಿಧಾನದಿಂದ ಜನಪ್ರಿಯರಾದ ಸ್ವಾಸ್ಥ್ಯ (ವೆಲ್‌ನೆಸ್) ಪ್ರಭಾವಿ ಝರಿನಾ ಮನಯೆಂಕೋವಾ ಅವರು ಇತ್ತೀಚೆಗೆ ಇನ್‌ಸ್ಟಾಗ್ರಾಮ್ ವಿಡಿಯೋ ಒಂದರಲ್ಲಿ, ತಮ್ಮ ನಿಜವಾದ ವಯಸ್ಸು 39 ಆದರೂ ತಮ್ಮ ಜೈವಿಕ … Read more

ನಕಲಿ ಕ್ಲಿನಿಕ್‌ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು

ಅಕ್ರಮ ಕ್ಲಿನಿಕ್ (Illegal clinic) ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಜತೆ ಸೇರಿ ಮಹಿಳೆಯೊಬ್ಬಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಯೂಟ್ಯೂಬ್ ವಿಡಿಯೊ ಟ್ಯುಟೋರಿಯಲ್ ನೋಡಿ ಸರ್ಜರಿ ಮಾಡಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ. WhatsApp Group Join Now ಅಕ್ರಮವಾಗಿ ಕ್ಲಿನಿಕ್‌ ನಡೆಸುತ್ತಿದ್ದ ಆರೋಪಿಗಳು ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ಶಸ್ತ್ರಚಿಕಿತ್ಸೆಗೆ ನಡೆಸಿದ್ದಾರೆ ಪೊಲೀಸರು ತಿಳಿಸಿದ್ದಾರೆ. ತೆಹಬಹಾದೂರ್ ರಾವತ್ ಎಂಬುವವರ ಪತ್ನಿ ಮುನಿಶ್ರಾ ರಾವತ್ ಕಿಡ್ನಿ ಸ್ಟೋನ್‍ಗೆ ಸಂಬಂಧಿಸಿದ ಕಾಯಿಲೆಯಿಂದ … Read more

ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!

ಲಿವರ್ (ಯಕೃತ್ತು) ನಮ್ಮ ದೇಹದೊಳಗಿನ ಅನೇಕ ಕಾರ್ಯಗಳನ್ನು ನಿರ್ವಹಿಸುವ ಅತ್ಯಂತ ಶ್ರಮಜೀವಿ ಅಂಗಗಳಲ್ಲಿ ಒಂದು. ಯಕೃತ್ತು ಪಿತ್ತರಸವನ್ನು ಉತ್ಪಾದಿಸುತ್ತದೆ, ಇದು ನಾವು ಸೇವಿಸುವ ಕೊಬ್ಬನ್ನು ಜೀರ್ಣಿಸಿಕೊಳ್ಳಲು ನೆರವಾಗುತ್ತದೆ. ಅಷ್ಟೇ ಅಲ್ಲ, ಇದು ಹೆಚ್ಚುವರಿ ಗ್ಲೂಕೋಸ್ ಅನ್ನು ಗ್ಲೈಕೊಜೆನ್ ಆಗಿ ಸಂಗ್ರಹಿಸಿ, ಅಗತ್ಯವಿದ್ದಾಗ ಮತ್ತೆ ಶಕ್ತಿಯ ರೂಪದಲ್ಲಿ ಬಿಡುಗಡೆ ಮಾಡುತ್ತದೆ. WhatsApp Group Join Now ಯಕೃತ್ತು ಕೊಬ್ಬನ್ನು ಒಡೆಯಲು ಮತ್ತು ದೇಹದಲ್ಲಿರುವ ವಿಷಕಾರಿ ಅಂಶಗಳನ್ನು ಹೊರಹಾಕಲು ಸಹಾಯ ಮಾಡುವ ಒಂದು ಅವಿಭಾಜ್ಯ ಅಂಗವಾಗಿದೆ. ಆದರೂ, ಯಕೃತ್ತಿನ ಕಾಯಿಲೆಯು … Read more

ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು

ಹಾಸನ  ಹೊರವಲಯದ ಬಿಟ್ಟಗೌಡನಹಳ್ಳಿ ಬಳಿ ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಹಾಸನ ತಾಲೂಕಿನ ಹೂವಿನಹಳ್ಳಿ ಕಾವಲು ಗ್ರಾಮದ ನಿವಾಸಿ ಮೆಕ್ಯಾನಿಕ್  ಕೀರ್ತಿ(22) ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ಬಳಿಕ ಹಂತಕರು ಶವ ಮುಂದೆ ಸೆಲ್ಫಿ ವಿಡಿಯೋ ಮಾಡಿ ವಿಕೃತಿ ಮೆರೆದಿದ್ದಾರೆ. WhatsApp Group Join Now ನಾವೇ ಇವನನ್ನು ಹೊಡೆದು ಕೊಂದಿದ್ದೇವೆಂದು ಶವದೊಂದಿಗೆ ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ. ಸದ್ಯ ಇದೇ ವಿಡಿಯೋವನ್ನು ಆಧರಿಸಿ ಸ್ಥಳಕ್ಕೆ ಶ್ವಾನದಳ, ಎ‌ಎಸ್‌ಪಿ ಭೇಟಿ ಪರಿಶೀಲನೆ … Read more

ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!

ಕೊಪ್ಪಳದಲ್ಲಿ ಹೃದಯ ವಿದ್ರಾವಕ ಘಟನೆಯೊಂದು ನಡೆದಿದ್ದು, ಇನ್ನೆರಡು ವಾರದಲ್ಲಿ ಹಸೆಮಣೆ ಏರಿ ಹೊಸ ಜೀವನಕ್ಕೆ ಕಾಲಿಡಬೇಕಿದ್ದ ಜೋಡಿಯೊಂದು ಪ್ರಿವೆಡ್ಡಿಂಗ್ ಶೂಟಿಂಗ್‌ಗೆ ಹೋಗಿ ಬರುವಾಗ ರಸ್ತೆ ಅಪಘಾತದಲ್ಲಿ ಮೃತಪಟ್ಟಿರುವ ಆಘಾತಕಾರಿ ಘಟನೆಯೊಂದು ಭಾನುವಾರ ಕೊಪ್ಪಳ ಜಿಲ್ಲೆಯ ಗಂಗಾವತಿ ಸಮೀಪ ನಡೆದಿದೆ. WhatsApp Group Join Now ಕರಿಯಪ್ಪ ಮಡಿವಾಳ್‌ ಹನುಮನಹಟ್ಟಿ (26) ಹಾಗೂ ಕವಿತಾ ಪವಾಡೆಪ್ಪ ಮಡಿವಾಳ (19) ಮೃತ ಜೋಡಿ. 5 ತಿಂಗಳ ಹಿಂದೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಡಿ.21ರಂದು ಮದುವೆ ನಿಶ್ಚಯವಾಗಿತ್ತು. ಅದರ ಪ್ರಯುಕ್ತ ಪ್ರೀವೆಡ್ಡಿಂಗ್ ಶೂಟಿಂಗ್‌ಗಾಗಿ … Read more

ಗೋ ಮಾತೆಗೆ ಚಿಕನ್‌ ಮೋಮಸ್‌ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!

ಇಲ್ಲಿನ ಯುವಕನೊಬ್ಬ ಹಸುವೊಂದಕ್ಕೆ ಚಿಕ‌ನ್‌ ಮೊಮೊಸ್ ತಿನ್ನಿಸಿದ ಆರೋಪದ ಮೇಲೆ ಬಜರಂಗ ದಳ ಹೆಸರಿನ ಗುಂಪೊಂದು ಆತನನ್ನು ಥಳಿಸಿ, ಬೀದಿಯಲ್ಲಿ ಮೆರವಣಿಗೆ ನಡೆಸಿ, ಎಫ್‌ಐಆರ್‌ ದಾಖಲಾಗುವಂತೆ ಮಾಡಿದ ಘಟನೆ ನಡೆದಿದೆ. WhatsApp Group Join Now ನಿಕ್ಕು ಪಂಡಿತ್‌ ಎಂಬುವವರು ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಿಂದ ಹಂಚಿಕೊಂಡಿರುವ ವಿಡಿಯೋದಲ್ಲಿ ʻ28 ವರ್ಷದ ಯುವಕನೊಬ್ಬನನ್ನು ಐದಕ್ಕೂ ಹೆಚ್ಚು ಮಂದಿ ರಸ್ತೆಯಲ್ಲಿ ಕರೆದುಕೊಂಡು ಮೆರವಣಿಗೆ ಮಾಡುತ್ತಿರುವುದು. ಜೊತಗೆ ಆತನ ಬಾಯಿಂದ ಜೈ ಶ್ರೀರಾಮ್‌, ಜೈ ಗೋ ಮಠ ಎಂದು ಹೇಳಿಸುತ್ತಿರುವುದು, ಹಿಗ್ಗಾಮುಗ್ಗ … Read more

ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ

ಕಲ್ಯಾಣ ಕರ್ನಾಟಕ ಭಾಗದ ಅತ್ಯಂತ ಹಿಂದುಳಿದ ಜಿಲ್ಲೆ.ಕೊಪ್ಪಳ ಜಿಲ್ಲೆಯಲ್ಲಿ ಇನ್ನು ಜಾತಿ (caste )ವ್ಯವಸ್ಥೆ ಜೀವಂತವಾಗಿದೆ.ಜಿಲ್ಲೆಯ ಕೆಲ ಕಡೆ ಅಸ್ಪ್ರಶ್ಯತೆ ಅನ್ನೋ ಪೆಡಂಭೂತ ಜೀವಂತವಾಗಿದೆ. ಕಳೆದ ಕೆಲ ದಿನಗಳ ಹಿಂದೆ ದಲಿತರ ಮನೆಗೆ ಬೆಂಕಿ ಹಚ್ಚಿರೋ ಪ್ರಕರಣ ಇನ್ನು ಮಾಸಿಲ್ಲ.ಹೀಗೆ ಜಿಲ್ಲೆಯಲ್ಲಿ ಒಂದಲ್ಲ ಒಂದು ಕಡೆ ಜಾತಿ ಪದ್ದತಿ ಇನ್ನು ಜೀವಂತವಾಗಿದೆ. ಇದೀಗ ಇದೇ ಜಾತಿ ಪದ್ದತಿ ಪ್ರೀತಿಸಿ ಮದುವೆಯಾಗಿದ್ದ ನವ ಜೋಡಿಯನ್ನ ಬೇರ್ಪಡಿಸಿದೆ. WhatsApp Group Join Now ಹೌದು…ಕೊಪ್ಪಳ ತಾಲೂಕಿನ ಚುಕ್ಕನಕಲ್ ಗ್ರಾಮದ ನಿವಾಸಿ … Read more

ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್

ಬೆಂಗಳೂರು ಟೆಕ್ಕಿ ತೇಜಸ್‌ ಎಂಬವರನ್ನು ಲೈಂಗಿಕ ಸಮಸ್ಯೆಗೆ ಪರಿಹಾರ ನೀಡುವ ನೆಪದಲ್ಲಿ ಮೋಸಮಾಡಿ 48 ಲಕ್ಷ ರೂ. ವಂಚಿಸಿದ ವಿಜಯ್ ಗುರೂಜಿಯನ್ನು ಕೆಲ ದಿನಗಳ ಹಿಂದೆಯಷ್ಟೆ ಪೊಲೀಸರು ಬಂಧಿಸಿದ್ದರು. ಇದೀಗ ಗುರೂಜಿಯ ಸಹಚರನನ್ನೂ ಸಹ ಜ್ಞಾನ ಭಾರತಿ ಪೊಲೀಸರು ಅರೆಸ್ಟ್ ಮಾಡಿದ್ದು, ಇಬ್ಬರನ್ನೂ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲಾಗಿದೆ. WhatsApp Group Join Now ತೆಲಂಗಾಣದಲ್ಲಿ ಸೆರೆಸಿಕ್ಕ ಆರೋಪಿ ವಿಜಯ್ ಗುರೂಜಿ ಮತ್ತು ಆತನ ಸಹಚರರಿಂದ ಮೋಸ ಹೋದ ಟೆಕ್ಕಿ ತೇಜಸ್, ತೀವ್ರ ಅನಾರೋಗ್ಯ ಸಮಸ್ಯೆ ಎದುರಾದಾಗ ಪೊಲೀಸರಲ್ಲಿ … Read more