‘ಸೀರಿಯಲ್ ಕಿಲ್ಲರ್’ ಮಹಿಳೆಯಿಂದ ಶಾಕಿಂಗ್‌ ಹೇಳಿಕೆ: ಏಕಾದಶಿ, ದಶಮಿಯಂದೇ ನಾಲ್ಕು ಮಕ್ಕಳ ಹತ್ಯೆ !

ಹರಿಯಾಣದ ಪಾಣಿಪತ್‌ನಲ್ಲಿ ಸರಣಿ ಮಕ್ಕಳ ಹತ್ಯೆ ಆರೋಪದ ಮೇಲೆ 34 ವರ್ಷದ ಪೂನಂ ಎಂಬ ಮಹಿಳೆಯನ್ನು ಮಂಗಳವಾರ ಬಂಧಿಸಲಾಗಿದೆ. ಈಕೆಯ ಪತಿ ನವೀನ್, ಬರೋಡಾ ಪೊಲೀಸ್ ಠಾಣೆಯಲ್ಲಿ ಆಕೆಯ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರ ಪ್ರಕಾರ, ತನ್ನ ಮಕ್ಕಳಿಗಿಂತ ‘ಹೆಚ್ಚು ಆಕರ್ಷಕವಾಗಿ’ ಅಥವಾ ‘ಸುಂದರವಾಗಿ’ ಇರುವ ಮಕ್ಕಳನ್ನು ಕೊಲ್ಲಲು ತನಗೆ ಪ್ರೇರಣೆ ಬರುತ್ತಿತ್ತು ಎಂದು ಪೂನಂ ಒಪ್ಪಿಕೊಂಡಿದ್ದಾಳೆ. WhatsApp Group Join Now ಇತರ ಮಕ್ಕಳ ಕೊಲೆಗೆ ತನ್ನ ಮಗ ಸಾಕ್ಷಿಯಾಗಿದ್ದಾನೆ ಎಂಬ ಭಯದಿಂದ, ಪೂನಂ … Read more

ಗ್ಯಾಸ್ ಗೀಸರ್ ಹಾಕಿಸಿದ್ದೀರಾ? ಹುಷಾರು..! ಗ್ಯಾಸ್‌ ಸೋರಿಕೆಯಾಗಿ 24 ರ ಯುವತಿ ಸಾವು

ಬೆಂಗಳೂರಿನಲ್ಲಿ (Bengaluru) ಗ್ಯಾಸ್ ಗೀಸರ್ (Gas Geyser) ಅವಘಡಕ್ಕೆ ಮತ್ತೊಂದು ಬಲಿಯಾಗಿದೆ. ಸ್ನಾನ ಮಾಡುವ ವೇಳೆ ವಿಷಕಾರಿ ಅನಿಲ ಬಿಡುಗಡೆಯಾದ ಪರಿಣಾಮ 24 ವರ್ಷದ ಯುವತಿಯೊಬ್ಬಳು ಸಾವನ್ನಪ್ಪಿದ ಘಟನೆ ತೋಟದಗುಡ್ಡದಹಳ್ಳಿಯಲ್ಲಿ ನಡೆದಿದೆ. ಮೃತ ಯುವತಿಯನ್ನು 24 ವರ್ಷದ ಭೂಮಿಕಾ ಎಂದು ಗುರುತಿಸಲಾಗಿದೆ. WhatsApp Group Join Now ಕಳೆದ 15 ದಿನಗಳಿಂದ ಭೂಮಿಕಾ ಮತ್ತು ಕೃಷ್ಣಮೂರ್ತಿ ಎಂಬುವವರು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಅದರಂತೆ ಇದೀಗ ಸ್ನಾನಕ್ಕೆ ಹೋದಾಗ ಕಾರ್ಬನ್ ಮೋನಾಕ್ಸೈಡ್ ಸೋರಿಕೆಯಾಗಿ ಈ ಅವಘಡ ಸಂಭವಿಸಿದೆ. ಕೃಷ್ಣಮೂರ್ತಿ … Read more

‘ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು’ : ಸಿಎಂ ಸಿದ್ದರಾಮಯ್ಯ

ಹುಟ್ಟುವಾಗ ಹಿಂದೂವಾಗಿದ್ದೆ, ಸಾಯುವಾಗ ಹಿಂದೂವಾಗಿ ಸಾಯಲಾರೆ ಎಂದು ಅಂಬೇಡ್ಕರ್ ಹೇಳಿದ್ರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾll ಬಿ.ಆರ್. ಅಂಬೇಡ್ಕರ್ ರವರ 69ನೇ ಮಹಾ ಪರಿನಿರ್ವಾಣ ದಿನದ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ, ಮಾತನಾಡಿದರು. WhatsApp Group Join Now ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ … Read more

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು

ಕೋವಿಡ್‌ ನಂತರ ಯುವಕರಲ್ಲಿ ಹೃದಯಾಘಾತ ಹಾಗೂ ಹೃದಯಸ್ತಂಭನದಂಥ ಘಟನೆಗಳು ಹೆಚ್ಚಾಗುತ್ತಿದೆ. ಈ ಬಗ್ಗೆ ವೈದ್ಯರು ಕೂಡ ಎಚ್ಚರಿಕೆ ನೀಡಿದ್ದಾರೆ. ಹಾಗಿದ್ದರೂ ಚಿಕ್ಕವಯಸ್ಸಿನವೇ ಹೃದಯಾಘಾತಕ್ಕೆ ಬಲಿಯಾಗುವುದು ಕಡಿಮೆಯಾಗಿಲ್ಲ. ಲೈಫ್‌ಸ್ಟೈಲ್‌ನಲ್ಲಿನ ದೊಡ್ಡ ಮಟ್ಟದ ಬದಲಾವಣೆಗಳೇ ಇದಕ್ಕೆ ಕಾರಣ ಎಂದು ಹೇಳಿದರೂ, ಜಿಮ್‌ನಲ್ಲಿ ವರ್ಕ್‌ಔಟ್‌ ಮಾಡುವಾಗಲೇ ಸಾವು ಕಂಡ ಸಾಕಷ್ಟು ವರದಿಗಳು ಆಗಿವೆ. WhatsApp Group Join Now ಅದೇ ರೀತಿಯ ಪ್ರಕರಣ ಕೊಪ್ಪಳದಲ್ಲಿ ವರದಿಯಾಗಿದ್ದು, 28 ವರ್ಷದ ಯುವಕ, ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕನಾಗಿರುವ ಸಂದೇಶ್ ಹೃದಯಾಘಾತದಿಂದ ಸಾವು ಕಂಡಿದ್ದಾರೆ. … Read more

15 ದಿನಗಳಿಂದ ಏರಿಯಾದಲ್ಲಿ ದುರ್ವಾಸನೆ: ವಾಸನೆ ಜಾಡು ಹಿಡಿದ ಪೊಲೀಸರಿಗೆ ಸಿಕ್ಕಿದ್ದು ಟೆಕ್ಕಿ ಶವ.!

ಆ ಏರಿಯಾದ ಜನರು ಕಳೆದ ಎರಡು ವಾರಗಳಿಂದ ದುರ್ವಾಸನೆಗೆ ಬೇಸತ್ತಿದ್ದರು. ಹೆಗ್ಗಣ್ಣ ಸತ್ತಿರಬಹುದೆಂದು ಹಾದಿ ಬದಿಯ ಚರಂಡಿಗೆ ನೀರು ಸುರಿಯುತ್ತಿದ್ದರು. ಆದರೆ ಇಂದು ಪೊಲೀಸರು (police) ಎಂಟ್ರಿಕೊಟ್ಟಾಗ ಬೆಚ್ಚಿಬಿದ್ದಿದ್ದರು. ದುರ್ವಾಸನೆ ಜಾಡು ಹಿಡಿದ ಪೊಲೀಸರಿಗೆ ಕೊಳೆತ ಶವ (deadbody) ಸಿಕ್ಕಿತ್ತು. WhatsApp Group Join Now ಇಂದು ಬಸವೇಶ್ವರ ನಗರ ಪೊಲೀಸರು ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಮನೆಯೊಂದರಲ್ಲಿ ಕೊಳೆತು ನಾರುತ್ತಿತ್ತು ಶವ ಬೆಂಗಳೂರಿನ ಮಂಜುನಾಥ್ ನಗರದ 3ನೇ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಕಳೆದ … Read more

ಎರಡನೇ ಬಾರಿಗೆ ಭೇಟಿ : ಸತೀಶ್ ಜಾರಕಿಹೊಳಿ ಬಳಿ ಬೆಂಬಲ ಕೇಳಿದ್ರಾ ಡಿಕೆ ಶಿವಕುಮಾರ್.!

• ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷೆಯಲ್ಲಿರುವ ಡಿಕೆ ಶಿವಕುಮಾರ್, ಜಾರಕಿಹೊಳಿ ಅವರ ಬೆಂಬಲ ಕೋರಿದ್ದಾರೆ ಎಂಬ ವರದಿಗಳು ಕೇಳಿಬಂದಿದ್ದವು. ಜಾರಕಿಹೊಳಿ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ಮಾಡುವ ಬಗ್ಗೆಯೂ ವರದಿಯಾಗಿತ್ತು. WhatsApp Group Join Now ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ಪವರ್ ಶೇರಿಂಗ್ ಹಗ್ಗಜಗ್ಗಾಟದ ನಡುವೆಯೇ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಹಿರಿಯ ಸಚಿವ ಸತೀಶ್ ಜಾರಕಿಹೊಳಿ ಖಾಸಗಿ ಮದುವೆ ಕಾರ್ಯಕ್ರಮವೊಂದರಲ್ಲಿ ಮುಖಾಮುಖಿಯಾಗಿದ್ದು, ಮಾತುಕತೆ ನಡೆಸಿರುವುದು ಸಾಕಷ್ಟು ಊಹಾಪೋಹಗಳಿಗೆ ಕಾರಣವಾಗಿದೆ. ಸಿದ್ದರಾಮಯ್ಯನವರ ಆಪ್ತ ವಲಯದಲ್ಲಿ ಕಾಣಿಸಿಕೊಳ್ಳುವ ಲೋಕೋಪಯೋಗಿ … Read more

ಲಿವರ್ ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಬೆಳಗ್ಗೆ ಈ ಒಂದು ಪಾನೀಯ ಕುಡಿಯಿರಿ

Liver Cancer Prevention : ಪ್ರತಿದಿನ ಎರಡು ಕಪ್ ಕಾಫಿ ಕುಡಿಯುವುದರಿಂದ ಲಿವರ್ ಕ್ಯಾನ್ಸರ್ ಆದ ಹೆಪಟೊಸೆಲ್ಯುಲರ್ ಕಾರ್ಸಿನೋಮ ಬರುವ ಅಪಾಯವನ್ನು 35% ರಷ್ಟು ಕಡಿಮೆ ಮಾಡಬಹುದು ಎಂದು ಅಧ್ಯಯನವೊಂದು ಹೇಳಿದೆ. WhatsApp Group Join Now ಪ್ರತಿದಿನ ಎರಡು ಕಪ್ ಕಾಫಿ ಕುಡಿಯುವುದರಿಂದ ಹೆಪಟೊಸೆಲ್ಯುಲರ್ ಕಾರ್ಸಿನೋಮ (Hepatocellular carcinoma (HCC) ಎಂಬ ಲಿವರ್ ಕ್ಯಾನ್ಸರ್ ಬರುವ ಅಪಾಯ 35% ಕಡಿಮೆಯಾಗುತ್ತದೆ ಎಂದು 130,000ಕ್ಕೂ ಹೆಚ್ಚು ಜನರ ಮೇಲೆ ನಡೆಸಿದ ಅಧ್ಯಯನದಿಂದ ತಿಳಿದುಬಂದಿದೆ. ಇದು ಪಾಲಿಫಿನಾಲ್‌ಗಳು, ಡೈಟರ್‌ಪೀನ್‌ಗಳು … Read more

ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ

ಐಎಎಸ್‌ ಅಧಿಕಾರಿ ಮಹಾಂತೇಶ್‌ ಬೀಳಗಿ ರಸ್ತೆ ಅಪಘಾತದಲ್ಲಿ ಸಾವು ಕಂಡ ಸುದ್ದಿ ಮಾಸುವ ಮುನ್ನವೇ ಅದೇ ರೀತಿಯ ಇನ್ನೊಂದು ಘಟನೆ ಧಾರವಾಡದಲ್ಲಿ ವರದಿಯಾಗಿದೆ. ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಪಂಚಾಕ್ಷರಿ ಸಾಲಿಮಠ ಅವರು ಪ್ರಯಾಣ ಮಾಡುತ್ತಿದ್ದ ಐ20 ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. WhatsApp Group Join Now ಕಾರ್‌ ಡಿಕ್ಕಿ ಹೊಡೆದ ಪರಿಣಾಮವಾಗಿ ಇನ್ಸ್‌ಪೆಕ್ಟರ್ ಹೊರಬರಲು ಸಾಧ್ಯವಾಗದೇ ಇದ್ದಿದ್ದರಿಂದ ಅವರೂ ಕೂಡ ಕಾರ್‌ನಲ್ಲಿಯೇ ಸಜೀವವಾಗಿ ದಹನವಾಗಿದ್ದಾರೆ. ಕಾರ್‌ನಲ್ಲಿ ಇನ್ಸ್‌ಪೆಕ್ಟರ್‌ ಸಾಲಿಮಠ ಪ್ರಯಾಣ ಮಾಡುತ್ತಿದ್ದರು. … Read more

ದೇವಾಲಯದ ಹಣ ದೇವರಿಗೆ ಮಾತ್ರ ಸೇರಿದ್ದು ; ಅನ್ಯ ಉದ್ದೇಶಗಳಿಗಾಗಿ ಬಳಕೆ ಮಾಡುವಂತಿಲ್ಲ : ಸುಪ್ರೀಂ ಕೋರ್ಟ್

ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳನ್ನು ಶ್ರೀಮಂತಗೊಳಿಸಲು ಬಳಸಲಾಗುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಡಿ.05 ರಂದು) ಅಭಿಪ್ರಾಯಪಟ್ಟಿದೆ. WhatsApp Group Join Now ತಿರುನೆಲ್ಲಿ ದೇವಾಲಯ ದೇವಸ್ವಂ ಠೇವಣಿಗಳನ್ನು ಹಿಂದಿರುಗಿಸುವಂತೆ ಕೇರಳ ಹೈಕೋರ್ಟ್ ನೀಡಿದ ನಿರ್ದೇಶನವನ್ನು ಪ್ರಶ್ನಿಸಿ ಕೇರಳದ ಕೆಲವು ಸಹಕಾರಿ ಬ್ಯಾಂಕುಗಳು ಸಲ್ಲಿಸಿದ್ದ ಅರ್ಜಿಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತು. ವಿಚಾರಣೆಯ ಸಮಯದಲ್ಲಿ, ಹೈಕೋರ್ಟ್ ನಿರ್ದೇಶನದಲ್ಲಿ ತಪ್ಪೇನಿದೆ ಎಂದು ಪೀಠ ಪ್ರಶ್ನಿಸಿದೆ. … Read more

ಇಸ್ಲಾಂ ಧರ್ಮಕ್ಕೆ ಮತಾಂತರವಾಗಲು ಮುಸ್ಲಿಂ ವ್ಯಕ್ತಿಯ ಕಿರುಕುಳ : ವಿವಾಹಿತ ಮಹಿಳೆ ಆತ್ಮಹತ್ಯೆ

ಬೆಳಗಾವಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದ್ದು, ಇಸ್ಲಾಂ ಧರ್ಮಕ್ಕೆ ಮತಾಂತರವಾಗುವಂತೆ ಮತ್ತು ಅನೈತಿಕ ಸಂಬಂಧವನ್ನು ಮುಂದುವರಿಸುವಂತೆ ಮುಸ್ಲಿಂ ವ್ಯಕ್ತಿಯೊಬ್ಬ ನೀಡುತ್ತಿದ್ದ ನಿರಂತರ ಕಿರುಕುಳ ಮತ್ತು ಕೊಲೆ ಬೆದರಿಕೆಯಿಂದ ಬೇಸತ್ತ ವಿವಾಹಿತೆಯೊಬ್ಬರು ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಈ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಗೋಣಗನೂರ ಗ್ರಾಮದಲ್ಲಿ ನಡೆದಿದೆ. WhatsApp Group Join Now ಮತಾಂತರ ಮತ್ತು ಕೊಲೆ ಬೆದರಿಕೆ ಮೃತ ಮಹಿಳೆಯನ್ನು ನಾಗವ್ವ ದೇಮಪ್ಪ ವಂಟಮೂರಿ (28) ಎಂದು ಗುರುತಿಸಲಾಗಿದೆ. ಆಕೆಯ ಕುಟುಂಬಸ್ಥರು ಗ್ರಾಮದ ಮಕ್ತುಮಸಾಬ್ ಪಾಟೀಲ್ ಎಂಬ … Read more