ನನ್ನ ದೇಹಕ್ಕೆ ಪತಿ ಪಾದರಸ ಇಂಜೆಕ್ಟ್‌ ಮಾಡಿದ್ದಾರೆ ಎಂದು ಎಫ್‌ಐಆರ್‌ ದಾಖಲಿಸಿದ ಮರುದಿನವೇ ಪತ್ನಿ ಸಾವು!

9 ತಿಂಗಳ ಹಿಂದೆ ಪಾದರಸದ ಇಂಜೆಕ್ಷನ್‌ಅನ್ನು ಪತ್ನಿಗೆ ನೀಡಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಪತ್ನಿ ಸಾವನ್ನಪ್ಪಿದ್ದ ಆಘಾತಕಾರಿ ಘಟನೆ ಬೆಂಗಳೂರು ಸಮೀಪದ ಅತ್ತಿಬೆಲೆಯಲ್ಲಿ ನಡೆದಿದೆ. ಎನ್‌ಡಿಟಿವಿ ವರದಿಯ ಪ್ರಕಾರ, ಫೆಬ್ರವರಿ 26 ರಂದು ತನ್ನ ಪತಿ ಬಸವರಾಜ್ ಮತ್ತು ಅವನ ತಂದೆ ಮರಿಶ್ವಾಮಾಚಾರಿ ತನ್ನನ್ನು ಕೊಲ್ಲುವ ಉದ್ದೇಶದಿಂದ ತನ್ನ ದೇಹಕ್ಕೆ ಪಾದರಸವನ್ನು ಚುಚ್ಚಿದ್ದಾರೆ ಎಂದು ವಿದ್ಯಾ ಹೇಳಿಕೊಂಡಿದ್ದರು. WhatsApp Group Join Now ವಿದ್ಯಾ ಹೇಳಿಕೆ ನೀಡಿದ ನಂತರ ನವೆಂಬರ್ 23 ರಂದು ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ … Read more

ತಾಯಿ ಸಮಾಧಿ ಪಕ್ಕದಲ್ಲೇ ಮಹಾಂತೇಶ್ ಬೀಳಗಿ ಅಂತ್ಯಕ್ರಿಯೆ! ಅಪಘಾತದ ಕಾರಣ ಕುಟುಂಬಸ್ಥರಿಂದ ಅಗ್ನಿಸ್ಪರ್ಶ!

ತಾಯಿಗೆ ಪಿಂಚಣಿ ನೀಡಲು ಲಂಚ ಕೇಳಿದ್ದ ಅಧಿಕಾರಿಗಳ ಭ್ರಷ್ಟಾಚಾರಕ್ಕೆ ಬೇಸತ್ತಿದ್ದ ಮಹಾಂತೇಶ್ ಬೀಳಗಿ, ಕಷ್ಟಪಟ್ಟು ಓದಿ ಐಎಎಸ್ ಅಧಿಕಾರಿಯಂತಹ ಉನ್ನತ ಹುದ್ದೆಗೇರಿದ್ದರು. ಹಾಲಿ ಕರ್ನಾಟಕ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಮಹಾಂತೇಶ ಬೀಳಗಿ ಅವರು ನಿನ್ನೆ ಸಂಜೆ ನಡೆದ ಕಾರು ಅಪಘಾತದಲ್ಲಿ ದುರಂತ ಸಾವಿಗೀಡಾಗಿದ್ದರು. WhatsApp Group Join Now ಅಪಾರ ಪ್ರೀತಿ ಹೊಂದಿದ್ದ ಅಮ್ಮನ ಸಮಾಧಿ ಪಕ್ಕದಲ್ಲಿಯೇ ಮಹಾಂತೇಶ್ ಅವರ ಅಂತ್ಯಕ್ರಿಯೆ ಮಾಡಲಾಗುತ್ತದೆ ಎಂದು ಕುಟುಂಬ ಮೂಲಗಳು ತಿಳಿಸಿದ್ದವು. ಆದರೆ, ಕೊನೇ ಕ್ಷಣದಲ್ಲಿ ಅಮ್ಮನ ಮಡಿಲು … Read more

ಕಲಬೆರೆಕೆ ನಂದಿನಿ ತುಪ್ಪ ಜಾಲ – ಗಂಡ ಹೆಂಡತಿಯೇ ಕಿಂಗ್‌ ಪಿನ್! ದಂಪತಿ ಅರೆಸ್ಟ್ – Nandini Ghee

ನಂದಿನಿ ತುಪ್ಪ (Nandini Ghee) ಕಲಬೆರಕೆ ಮಾಡಿ ಮಾರಾಟ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಬೇಧಿಸಿದ್ದು ಈ ಪ್ರಕರಣದ ಕಿಂಗ್‌ ಪಿನ್‌ ಗಳಾಗಿದ್‌ ದಂಪತಿಯನ್ನು ಅರೆಸ್ಟ್‌ ಮಾಡಲಾಗಿದೆ. WhatsApp Group Join Now ಶಿವಕುಮಾರ್ ಹಾಗೂ ರಮ್ಯಾ ಬಂಧಿತ ಆರೋಪಿಗಳಾಗಿದ್ದು, ಈ ದಂಪತಿಗಳನ್ನು ಸಿಸಿಬಿ ಅಧಿಕಾರಿಗಳು ವಿಚಾರಣೆಗೊಳಪಡಿಸಿದ್ದಾರೆ. ನಕಲಿ ನಂದಿನಿ ತುಪ್ಪ ತಯಾರಿ ಘಟಕದ ಮೇಲೆ ಸಿಸಿಬಿ ಪೊಲೀಸರ ದಾಳಿ ನಡೆದಿದ್ದ ವೇಳೆ ಕಲಬೆರೆಕೆ ಮಾರಾಟ ಜಾಲ ಬೆಳಕಿಗೆ ಬಂದಿತ್ತು. ತಮಿಳುನಾಡಿನಲ್ಲಿ ನಕಲಿ ತುಪ್ಪ ತಯಾರಿಕೆ ಘಟಕ … Read more

ಪರಮೇಶ್ವರ್ ದುಡಿದಿರುವ ಕೂಲಿಯೇ ಬಾಕಿಯಿದೆ, ಡಿಕೆಶಿ ಲೆಕ್ಕ ಆಮೇಲೆ – ಮಾಜಿ ಸಚಿವ ಕೆ‌.ಎನ್. ರಾಜಣ್ಣ

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ (Cm siddaramaiah) ಹಾಗೂ ಡಿಕೆಶಿ ನಡುವೆ ತೀವ್ರ ಪೈಪೋಟಿ ನಡುವೆಯೇ ಮಾಜಿ ಸಚಿವ ಕೆಎನ್ ರಾಜಣ್ಣ (Kn Rajanna) ಪ್ರತಿಕ್ರಿಯಿಸಿದ್ದು, ಜಿ ಪರಮೇಶ್ವರ್ ಸಿಎಂ ಆದರೆ ನಾನು ಅವರ ಪರವಾಗಿ ಇದ್ದೇನೆ, ಬದಲಾವಣೆ ಅಂತ ಆದರೆ ಪರಮೇಶ್ವರ್ ಅವರೇ ಸಿಎಂ ಆಗಬೇಕು ಎಂದು ಹೇಳಿದರು. WhatsApp Group Join Now ಈ ಬಗ್ಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಕೂಲಿ ಬಗ್ಗೆ ಮಾತನಾಡುವುದಾದರೆ, ಪರಮೇಶ್ವರ್ 2013ರಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತಂದವರು. … Read more

‘ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು’ : ಡಿಸಿಎಂ ಡಿಕೆಶಿಗೆ ರಾಹುಲ್ ಗಾಂಧಿ ಸಂದೇಶ..!

ರಾಜ್ಯದಲ್ಲಿ ಸಿಎಂ ಬದಲಾವಣೆ ಕುರಿತು ಭಾರಿ ಚರ್ಚೆ ನಡೆಯುತ್ತಿದ್ದು ಅದರಲ್ಲೂ ಕಾಂಗ್ರೆಸ್ ಪಕ್ಷದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗು ಡಿಕೆ ಶಿವಕುಮಾರ್ ಬಣದ ಮಧ್ಯ ಕುರ್ಚಿಗಾಗಿ ಬಿಗ್ ಫೈಟ್ ನಡೆಯುತ್ತಿದೆ. ಇದರ ಮಧ್ಯ ಪ್ಲೀಸ್ ವೇಟ್‌ ಐ ವಿಲ್‌ ಕಾಲ್‌ ಯು ಅಂತ ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ರಾಹುಲ್‌ ಗಾಂಧಿ ಸಂದೇಶವನ್ನು ಕಳುಹಿಸಿದ್ದಾರೆ ಎನ್ನಲಾಗಿದೆ. WhatsApp Group Join Now ರಾಹುಲ್ ಗಾಂಧಿ ಜೊತೆಗೆ ನಿರಂತರ ಸಂಪರ್ಕದಲ್ಲಿರುವ ಡಿಸಿಎಂ ಡಿ.ಕೆ ಶಿವಕುಮಾರ್‌ ಅವರು ಮುಂದಿನ ಸನ್ನಿವೇಶದ ಬಗ್ಗೆ ಚರ್ಚೆ … Read more

ಕ್ರಿಕೆಟ್ ತಾರೆ ‘ಸ್ಮೃತಿ ಮಂಧಾನಾ’ಗೆ ಪಲಾಶ್ ಮೋಸ ಮಾಡಿದ್ರಾ.? ಚಾಟ್’ಗಳ ‘ಸ್ಕ್ರೀನ್ಶಾಟ್’ ವೈರಲ್

ಚಲನಚಿತ್ರ ನಿರ್ಮಾಪಕ-ಸಂಯೋಜಕ ಪಲಾಶ್ ಮುಚ್ಚಲ್ ಮತ್ತು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ಉಪನಾಯಕಿ ಸ್ಮೃತಿ ಮಂಧಾನ ನವೆಂಬರ್ 23ರ ಭಾನುವಾರದಂದು ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ವಿವಾಹವಾಗಲು ಸಜ್ಜಾಗಿದ್ದರು. ಅದ್ರಂತೆ, ಮದುವೆ ಕಾರ್ಯಗಳು ಕೂಡ ಆರಂಭವಾಗಿದ್ದವು. WhatsApp Group Join Now ಆದ್ರೆ, ಇದ್ದಕ್ಕಿದ್ದಂತೆ ಸ್ಮೃತಿ ತಂದೆಗೆ ಅನಾರೋಗ್ಯ ಉಂಟಾಗಿದ್ದು ಮದುವೆ ಹಠಾತ್ತನೆ ನಿಂತುಹೋಯಿತು. ಸ್ಮೃತಿಯ ತಂದೆ ಶ್ರೀನಿವಾಸ್ ಮಂಧಾನ ಅವರನ್ನ ಹೃದಯಾಘಾತದ ಲಕ್ಷಣಗಳು ಕಂಡುಬಂದ ನಂತರ ಸರ್ವಿತ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಒಂದು ದಿನದ ನಂತರ, ಹಠಾತ್ ಆರೋಗ್ಯ ಸಮಸ್ಯೆಯ … Read more

ಮಹಂತೇಶ್ ಬೀಳಗಿಯದ್ದು ಅಪಘಾತವಲ್ಲ, ಮರ್ಡರ್.! ಹೀಗೊಂದು ಬಾಂಬ್ ಹಾಕಿದ್ದು ಯಾರು.?

ನಿನ್ನೆ ಜೇವರ್ಗಿ ಬೈಪಾಸ್ ಬಳಿ ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಹಿರಿಯ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿಯವರದ್ದು ಮರ್ಡರ್ ಎಂದು ಬಾಂಬ್ ಹಾಕಲಾಗಿದೆ. ಇಂತಹದ್ದೊಂದು ಆರೋಪ ಮಾಡಿದವರು ಯಾರು ಗೊತ್ತಾ? ವಿಜಯಪುರದಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ ಮಹಂತೇಶ್ ಬೀಳಗಿ, ಅವರ ಸಹೋದರ ಸೇರಿದಂತೆ ಐವರು ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿತ್ತು. WhatsApp Group Join Now ಕಾರಿಗೆ ನಾಯಿ ಅಡ್ಡ ಬಂದಿದ್ದರಿಂದ ತಪ್ಪಿಸಲು ಹೋದಾಗ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ ಓರ್ವನ ಸ್ಥಿತಿ ಗಂಭೀರವಾಗಿದೆ. ಚಾಲಕ … Read more

ಇದು ‘ಮಹಾಂತೇಶ್ ಬೀಳಗಿ’ ಅವರು ‘IAS ಅಧಿಕಾರಿ’ಯಾದ ಹಿಂದಿನ ಮನಕಲಕುವ ಕತೆ

ಜಿಲ್ಲೆಯಲ್ಲಿ ಅತ್ಯಂತ ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಭೀಕರ ಕಾರು ಅಪಘಾತದಲ್ಲಿ ಸಹೋದರರೊಂದಿಗೆ ದುರ್ಮರಣ ಹೊಂದಿದ್ದಾರೆ. ಆದರೇ ತಮ್ಮ ಅಧಿಕಾರಾವಧಿಯಲ್ಲಿ ಒಂದೇ ಒಂದು ರೂಪಾಯಿಗೂ ಲಂಚಕ್ಕೆ ಬೇಡಿಕೆ ಇಡದಂತ ಪ್ರಾಮಾಣಿಕ ವ್ಯಕ್ತಿಯಾಗಿದ್ದರು ಎಂಬುದು ಅವರನ್ನು ಬಲ್ಲವರ ಮಾತು. ಇದಕ್ಕೊಂದು ಕಾರಣವಿದೆ. ಜೊತೆ ಜೊತೆಗೆ ಅವರು ಐಎಎಸ್ ಅಧಿಕಾರಿಯಾದ ಹಿಂದೆ ಮನಕಲಕುವ ಕತೆ ಇದೆ. WhatsApp Group Join Now ತನಗೆ 5 ವರ್ಷವಿದ್ದಾಗ ತನ್ನ ತಂದೆಯನ್ನು ಮಹಾಂತೇಶ್ ಬೀಳಗಿ ಕಳೆದುಕೊಂಡರು. ಕಡು ಬಡತನದಲ್ಲಿ ತಾಯಿ … Read more

ಹುಟ್ಟಿದ ನಾಲ್ಕನೇ ಮಗುವೂ ಹೆಣ್ಣು- ಕತ್ತು ಹಿಸುಕಿ ಕೊಂದೇ ಬಿಟ್ಟಳು ಪಾಪಿ ತಾಯಿ!

ಜನಿಸಿದ ನಾಲ್ಕನೇ ಮಗು ಕೂಡ ಹೆಣ್ಣಾಯಿತು (Girl) ಎಂದು ಪಾಪಿ ತಾಯಿಯೊಬ್ಬಳು ನೀಚ ಕೃತ್ಯ ಎಸಗಿದ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಗ್ರಾಮದಲ್ಲಿ ನಡೆದಿದೆ. ಆರೋಪಿಯನ್ನು ಅಶ್ವಿನಿ ಹಳಕಟ್ಟಿ ಎಂದು ಗುರುತಿಸಲಾಗಿದೆ. WhatsApp Group Join Now ಈಕೆ ಹೆಣ್ಣುಮಗು ಜನಿಸಿದ್ದಕ್ಕೆ ಕತ್ತು ಹಿಸುಕಿ 3 ದಿನದ ಹಸುಗೂಸನ್ನು ಕ್ರೂರವಾಗಿ ಕೊಲೆ ಮಾಡಿದ್ದಾಳೆ. ನಡೆದಿದ್ದೇನು? ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹಿರೇಮುಲಂಗಿ ಮೂಲದ ಅಶ್ವಿನಿ ಹಳಕಟ್ಟಿಗೆ ಈಗಾಗಲೇ ಮೂವರು ಹೆಣ್ಣುಮಕ್ಕಳಿದ್ದು, ಗಂಡು ಮಗುವಿನ ನಿರೀಕ್ಷೆಯಲ್ಲಿದ್ದರು. … Read more

ಹಣ ಕೇಳಿ ಹಿಂಸೆ ಕೊಟ್ಟ ಬೀದಿ ಕಾಮಣ್ಣ.. ಬೆಂಗಳೂರಿನ ಹೆಣ್ಣು ಮಕ್ಕಳೇ ಹುಷಾರ್..!

ಬೆಂಗಳೂರಲ್ಲಿ  ಬೀದಿ ಕಾಮಣ್ಣರ ಕಾಟ ಹೆಚ್ಚಾಗಿದ್ದು, ಹೆಣ್ಣು ಮಕ್ಕಳು ಹೆದರಿ ಓಡಾಡೋ ಪರಿಸ್ಥಿತಿ ನಿರ್ಮಾಣವಾಗಿದೆ. WhatsApp Group Join Now ಬೆಂಗಳೂರಿನ ವೈಟೀಲ್ಡ್ ಬಸ್‌ ಸ್ಟ್ಯಾಂಡ್‌ನಲ್ಲಿ ಯುವತಿಯ ಜತೆ ಕಾಮಿಷ್ಟನೊಬ್ಬ ಅನುಚಿತವಾಗಿ ವರ್ತಿಸಿದ್ದಾನೆ.ಹಣ ಕೊಟ್ಟು ಸಹಾಯ ಮಾಡಿದ ಯುವತಿಯ ಮೈ ಮುಟ್ಟಿ ಅಸಭ್ಯವಾಗಿ ವರ್ತಿಸಿದ್ದಾನೆ. ಯುವತಿಯೊಬ್ಬಳ ಬಳಿ ಬಂದು ನಾನು ಮೆಜೆಸ್ಟಿಕ್‌ಗೆ ಹೋಗಬೇಕು 100 ರೂ. ಕೊಡಿ ಎಂದು ಸಹಾಯ ಕೋರಿದ್ದಾನೆ.ಹಣ ಕೊಟ್ಟ ಬಳಿಕ ಬಲವಂತವಾಗಿ ಮೈಮುಟ್ಟಿ, ಹಗ್ ಮಾಡು ಎಂದು ಹಿಂಸೆ ಕೊಟ್ಟಿದ್ದಾನೆ. ಯುವತಿ ಆತನ … Read more