Parihara Payment : ನಮಸ್ಕಾರ ಸ್ನೇಹಿತರೇ, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ. ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ.
ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು. ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.
ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಿರೇಮಲ್ಲನಹೊಳೆ ಗ್ರಾಮದಲ್ಲಿ ಕೆರೆ ಕೋಡಿಯಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿದ್ದರಿಂದ ಇಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಇಲ್ಲಿರುವ 35 ಮನೆಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಸೂಚಿಸಲಾಗಿದ್ದು ಮನೆ ಪರಿಹಾರದ ಜೊತೆಗೆ ಬೇರೆಡೆ ನಿವೇಶನ ನೀಡಿ ಇವರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ.
ಇವರಿಗೆ ಮುಂದಿನ ಎರಡು ತಿಂಗಳಲ್ಲಿ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ. ಮತ್ತು ಇದೇ ಗ್ರಾಮದಲ್ಲಿ ಮನೆಗಳು ಕುಸಿದಿದ್ದು ಈ ಮನೆಗಳಿಗೂ ಪರಿಹಾರದ ಜೊತೆಗೆ ಬದಲಿ ನಿವೇಶನ ಹಾಗೂ ಮನೆ ನಿರ್ಮಾಣ ಮಾಡಿಕೊಡಲು ತಿಳಿಸಲಾಗಿದೆ ಎಂದರು.
- ಬೆಳಗ್ಗೆ ಎದ್ದ ಕೂಡಲೇ ಈ ಎಲೆಯನ್ನು ತಿಂದ್ರೆ ಸಾಕು ನೋವಿಲ್ಲದೇ ಪುಡಿಯಾಗಿ ಹೊರಬರುತ್ತೆ ಕಿಡ್ನಿ ಸ್ಟೋನ್..!
- 12 ವೋಟ್ ಪಡೆದಿದ್ದು ಸರ್ದಾರ್ ವಲ್ಲಭಾಯಿ ಪಟೇಲ್, ಆದ್ರೆ ನೆಹರೂ ಹೇಗೆ ಪ್ರಧಾನಿಯಾದ್ರು
- ‘BJP- RSS ಭಿನ್ನಾಭಿಪ್ರಾಯದಿಂದ ಪಿತೂರಿ: ವೀರೇಂದ್ರ ಹೆಗ್ಗಡೆ ಅವರ ಮೇಲೆ ಷಡ್ಯಂತ್ರ ; ನನ್ನ ನಿರ್ಧಾರಕ್ಕೆ ಜೈನ ಸಮುದಾಯದಿಂದ ಮೆಚ್ಚುಗೆ’
- ಮಂಡ್ಯದಲ್ಲಿ 9 ನೇ ತರಗತಿ ವಿದ್ಯಾರ್ಥಿನಿಗೆ ‘ಲೈನ್’ : ಶಾಲಾ ಬಸ್ ಅಡ್ಡಗಟ್ಟಿದ ಪುಂಡರು ಅರೆಸ್ಟ್
- ಪ್ರಧಾನಿ ಮೋದಿ ಕೂಡ ವಿದೇಶ ಪ್ರವಾಸದಲ್ಲೇ ಇರುತ್ತಾರಲ್ಲ; ರಾಹುಲ್ ಕುರಿತ ಬಿಜೆಪಿ ಟೀಕೆಗೆ ಪ್ರಿಯಾಂಕಾ ಗಾಂಧಿ ತಿರುಗೇಟು
- Horoscope Today : ಇಂದು ಈ ರಾಶಿಯವರಿಂದ ನಿಮ್ಮ ಮೇಲೆ ತಪ್ಪು ಕಲ್ಪನೆ ಆರೋಪಗಳು ಬರಲಿವೆ
- ನೆಹರು, ಇಂದಿರಾ ಗಾಂಧಿ, ಸೋನಿಯಾ ಗಾಂಧಿಯಿಂದಲೂ ಮತಗಳ್ಳತನ : ಅಮಿತ್ ಶಾ ವಾಗ್ದಾಳಿ
- 40ರಲ್ಲೂ 25ರವರಂತೆ ಕಾಣಬೇಕೇ? ಆರೋಗ್ಯ ತಜ್ಞರು ಹೇಳಿದ ಈ 4 ಆಹಾರ ಪದ್ಧತಿ ನಿಮ್ಮನ್ನು ಸದಾ ಯಂಗ್ ಆಗಿ ಇಡುತ್ತೆ!
- ನಕಲಿ ಕ್ಲಿನಿಕ್ ಅಟ್ಟಹಾಸಕ್ಕೆ ಮತ್ತೊಂದು ಬಲಿ : ಯೂಟ್ಯೂಬ್ ನೋಡಿ ಶಸ್ತ್ರಚಿಕಿತ್ಸೆ ಮಾಡುತ್ತಿದ್ದ ವೇಳೆ ಮಹಿಳೆ ಸಾವು
- ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್ : ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
- ಹಾಸನದಲ್ಲಿ ಮೆಕ್ಯಾನಿಕ್ ಹತ್ಯೆ : ಬಳಿಕ ಶವದೊಂದಿಗೆ ವಿಡಿಯೋ ಮಾಡಿ ವಿಕೃತಿ ಮೆರೆದ ಹಂತಕರು
- ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
- ಗೋ ಮಾತೆಗೆ ಚಿಕನ್ ಮೋಮಸ್ ತಿನ್ನಿಸಿದ ಯುವಕ; ಹಲ್ಲೆ ಮಾಡಿ, ಮೆರವಣಿಗೆ ಮಾಡಿಸಿದ ಬಜರಂಗ ದಳ!
- ವಾರದ ಹಿಂದಷ್ಟೇ ಮದ್ವೆಯಾಗಿದ್ದ ಜೋಡಿಯನ್ನು ಅಗಲಿಸಿದ ಜಾತಿ : ಹೆಂಡ್ತಿಬೇಕೆಂದು ಎಸ್ಪಿ ಮೊರೆ ಹೋದ ಯುವಕ
- ಇಡೀ ರಾಜ್ಯದಲ್ಲಿ ಹಬ್ಬಿದ್ದ ನಕಲಿ ಲೈಂಗಿಕ ಔಷಧಿ ಜಾಲ ; ಗುಜರಾತ್ ಮೂಲದ ಆರೋಪಿ ಮನೋಜ್ ಅಂದರ್
- ನನ್ನ ಜೊತೆಗೂ ಬಾ : ಗೆಳೆಯನ ಗರ್ಲ್ಫ್ರೆಂಡ್ಗೆ ಸಂದೇಶ : ಪ್ರಶ್ನಿಸಿದ್ದಕ್ಕೆ ಸ್ನೇಹಿತನನ್ನೇ ಕೊಂದು ಪೀಸ್ ಪೀಸ್ ಮಾಡಿದ
- ಸ್ಕೂಲ್ ಬಸ್ ಹರಿದು 8 ವರ್ಷದ ಬಾಲಕಿ ಸಾವು ; ಚಾಲಕನ ನಿರ್ಲಕ್ಷ್ಯಕ್ಕೆ ಅಮಾಯಕ ಜೀವ ಬಲಿ
- ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ
- ರಾಜಧಾನಿಯಲ್ಲಿ ಹೆಚ್ಚಾಯ್ತು ರೋಡ್ ರೇಜ್ – ಬಿಎಂಟಿಸಿ ಚಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ಕ್ಯಾಬ್ ಡ್ರೈವರ್!
- ದಿನಭವಿಷ್ಯ : ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಸುದ್ದಿಯಿಂದ ಮನಸ್ಸಿಗೆ ನೋವುಂಟಾಗಲಿದೆ.
- ನಿವೃತ್ತ ಸಿಜೆಐ ಬಿ.ಆರ್ ಗವಾಯಿ ಮೇಲೆ ಶೂ ಎಸೆದಿದ್ದ ವಕೀಲ ರಾಕೇಶ್ ಕಿಶೋರ್ಗೆ ಚಪ್ಪಲಿ ಏಟು!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಎರಡು ಮಕ್ಕಳ ತಾಯಿ ಸಹವಾಸ ಮಾಡಿ ಮಸಣ ಸೇರಿದ ಯುವಕ : ತಾಯಿಯ ಲೀವಿಂಗ್ ಪಾರ್ಟನರ್ ಕತೆ ಮುಗಿಸಿದ ಅಮ್ಮ ಮಕ್ಕಳು
- ‘ರಿಷಬ್ ಶೆಟ್ಟಿ ತೊಡೆಯ ಮೇಲೆ ಮಲಗಿದ್ದು ಪಂಜುರ್ಲಿಯಲ್ಲ ನರ್ತಕ’ : ದೈವ ನರ್ತಕರ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ
- ಕುಡಿದ ಮತ್ತಿನಲ್ಲಿ ‘ಬೈಕ್ ಟ್ಯಾಕ್ಸಿ’ ಹತ್ತಿದ ಯುವತಿ ರಂಪಾಟ : ವಿಡಿಯೋ ವೈರಲ್
- ಕೆಕೆಆರ್ಟಿಸಿ ಬಸ್ ಪಲ್ಟಿ : ಶಾಲಾ ವಿದ್ಯಾರ್ಥಿಗಳು ಸೇರಿದಂತೆ 15 ಜನರಿಗೆ ಗಾಯ : ಕಂಡಕ್ಟರ್ ಸ್ಥಿತಿ ಗಂಭೀರ.!
- ಸಿಎಂ ಕುರ್ಚಿಗೆ 500 ಕೋಟಿ ರೇಟ್ ಫಿಕ್ಸ್ ಅಂದ ನವಜೋತ್ ಕೌರ್ ಗೆ ಮೆಂಟಲ್ ಆಸ್ಪತ್ರೆಗೆ ಸೇರಿ ಎಂದು ಗುಡುಗಿದ ಡಿಕೆ ಶಿವಕುಮಾರ್
- ಮೋದಿ ಪ್ರಧಾನಿಯಾಗಿದ್ದಷ್ಟು ಅವಧಿ ನೆಹರು ಸ್ವಾತಂತ್ರ್ಯಕ್ಕಾಗಿ ಜೈಲಿನಲ್ಲಿದ್ದರು ಎಂದು ಕಿಡಿ ಕಾರಿದ ಪ್ರಿಯಾಂಕಾ ಗಾಂಧಿ
- ಜಿನ್ನಾ ಎದುರು ಮಂಡಿಯೂರಿದ್ದ ನೆಹರು, ವಂದೇ ಮಾತರಂ ತುಂಡರಿಸಿದ ಕಾಂಗ್ರೆಸ್ : ಇತಿಹಾಸದ ಕರಾಳ ಪುಟ ತೆರೆದಿಟ್ಟ ಪ್ರಧಾನಿ ಮೋದಿ
- ಅಮ್ಮ ನನ್ನನ್ನು ಕ್ಷಮಿಸು : ಇಷ್ಟವಿಲ್ಲದಿದ್ದರೂ ಬಲವಂತಕ್ಕೆ ಮಲಗಿದೆ ತಪ್ಪಾಯ್ತು, ಈ ದೇಹ ಮಣ್ಣಾಗಲಿ : ಯುವತಿ ಆತ್ಮಹತ್ಯೆ!
- ಗಂಡ ವಿದೇಶದಲ್ಲಿ, ಪತ್ನಿ ಪ್ರಿಯಕರನ ತೋಳಿನಲ್ಲಿ, ಇಬ್ಬರಿಗೂ ಮದುವೆ ಮಾಡಿಸಿದ ಅತ್ತೆ-ಮಾವ
- ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
































