Parihara Payment : ನಮಸ್ಕಾರ ಸ್ನೇಹಿತರೇ, ಮಳೆಯಿಂದ ಬೆಳೆ ಹಾನಿಯಾದ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಮಳೆಯಿಂದಾಗಿ ಬೆಳೆ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ಇದನ್ನೂ ಕೂಡ ಓದಿ : Ration Card Updates : ನಿಮ್ಮ ಬಳಿ ಇವುಗಳಿದ್ರೆ ಕೂಡಲೇ ‘ಬಿಪಿಎಲ್ ರೇಷನ್ ಕಾರ್ಡ್’ ಹಿಂದಿರುಗಿಸಿ : ಇಲ್ಲದಿದ್ರೆ ದಂಡ ಫಿಕ್ಸ್.! ಸಂಪೂರ್ಣ ಮಾಹಿತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂಗಾರು ಹಂಗಾಮಿನ ಅಕ್ಟೋಬರ್ ತಿಂಗಳಲ್ಲಿಯೇ ಶೇ 66 ರಷ್ಟು ಸುರಿದ ಅಧಿಕ ಮಳೆಯಿಂದ ರಾಜ್ಯದಲ್ಲಿ ಈವರೆಗೆ 56993 ಹೆಕ್ಟೇರ್ ಪ್ರದೇಶಕ್ಕೂ ಹೆಚ್ಚು ಪ್ರದೇಶದಲ್ಲಿ ಬೆಳೆಹಾನಿ ಉಂಟಾದ ವರದಿ ಇದ್ದು ಮುಂದಿನ ಮೂರು ದಿನಗಳಲ್ಲಿ ಜಂಟಿ ಬೆಳೆ ಸಮೀಕ್ಷೆ ನಡೆಸಿ ಹಾನಿಯಾದ ರೈತರಿಗೆ ಬರುವ ಹದಿನೈದು ದಿನಗಳಲ್ಲಿ ಡಿಬಿಟಿ ಮೂಲಕ ಬೆಳೆ ನಷ್ಟ ಪರಿಹಾರ ಒದಗಿಸಲಾಗುತ್ತದೆ. ಹಿಂಗಾರು ಹಂಗಾಮಿನಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ ಅತೀ ಹೆಚ್ಚು ಮಳೆಯಾಗಿದ್ದು ಪ್ರಾಥಮಿಕ ಅಂದಾಜು ಬೆಳೆ ನಷ್ಟಕ್ಕಿಂತ ಇನ್ನೂ ಹೆಚ್ಚಿನ ಬೆಳೆ ನಷ್ಟವಾಗಿರುವ ವರದಿ ನಿರೀಕ್ಷಿಸಲಾಗಿದ್ದು ಮೂರು ದಿನಗಳಲ್ಲಿ ಜಂಟಿ ಸಮೀಕ್ಷೆಯ ನಂತರ ಬೆಳೆ ನಷ್ಟದ ನಿಖರತೆ ತಿಳಿಯಲಿದೆ.
ಇದಕ್ಕಾಗಿಯೇ ಶನಿವಾರ ಮುಖ್ಯಮಂತ್ರಿಗಳೊಂದಿಗೆ ಅಧಿಕ ಮಳೆಯಾದ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಸೂಚನೆ ನೀಡಲಾಗುತ್ತದೆ ಎಂದರು. ಹಿಂಗಾರು ಹಂಗಾಮಿನಲ್ಲಿ 21 ಜನರ ಪ್ರಾಣಹಾನಿಯಾಗಿದ್ದು ಇದರಲ್ಲಿ 9 ಜನರು ಸಿಡಿಲಿನಿಂದ ಮರಣ ಹೊಂದಿದ್ದರೆ, 6 ಜನರು ಮನೆ ಕುಸಿತದಿಂದ ಸಾವನ್ನಪ್ಪಿದ್ದಾರೆ. 3 ರಿಂದ 4 ಜನರು ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮುಂಗಾರು ಸೇರಿದಂತೆ ಇಲ್ಲಿಯವರೆಗೆ 121 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಮುಂಗಾರು ಹಂಗಾಮಿನಲ್ಲಿ 2589 ಮತ್ತು ಹಿಂಗಾರಿನಲ್ಲಿ 121 ಮನೆಗಳು ಬಿದ್ದು ಹೋಗಿವೆ, ಇವರಿಗೆ ಮನೆ ಪರಿಹಾರದ ಜೊತೆಗೆ ಮನೆ ನಿರ್ಮಿಸಿಕೊಡಲಾಗುತ್ತದೆ.
ಇದನ್ನೂ ಕೂಡ ಓದಿ : Post Office Franchise : ಪೋಸ್ಟ್ ಆಫೀಸ್’ ಮೂಲಕ ಈ ‘ಬ್ಯುಸಿನೆಸ್’ ಮಾಡಿ, ತಿಂಗಳಿಗೆ 80,000 ರೂ. ಗಳಿಸಿ.!
ಸರ್ಕಾರಿ ಜಾಗದಲ್ಲಿ ಅನಧಿಕೃತವಾಗಿ ಕಟ್ಟಿದ ಮನೆ ಬಿದ್ದು ಹೋಗಿದ್ದಲ್ಲಿ ಎಸ್.ಡಿ.ಆರ್.ಎಫ್ ನಡಿ ಒಂದು ಲಕ್ಷ ಪರಿಹಾರ ನೀಡಲಾಗುತ್ತದೆ. ಮುಂಗಾರು ಹಂಗಾಮಿನಲ್ಲಿ 1.18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆನಷ್ಟವಾಗಿದ್ದು ಈಗಾಗಲೇ ಪರಿಹಾರ ನೀಡಲಾಗಿದ್ದು ಕೆಲವೇ ದಿನಗಳಲ್ಲಿ ಮುಂಗಾರು ಬೆಳೆನಷ್ಟ ಪರಿಹಾರ ಪಾವತಿ ಪೂರ್ಣವಾಗಲಿದೆ ಎಂದರು.
ಬೆಳೆಹಾನಿ, ಜೀವಹಾನಿ ಹಾಗೂ ಮನೆ ಬಿದ್ದುಹೋಗಿದ್ದಲ್ಲಿ ತಕ್ಷಣವೇ ಪರಿಹಾರ ನೀಡಲು ಜಿಲ್ಲಾಧಿಕಾರಿ, ತಹಶೀಲ್ದಾರರ ಖಾತೆಗಳಲ್ಲಿ 666 ಕೋಟಿಯಷ್ಟು ಹಣವಿದ್ದು ಪ್ರಕೃತಿ ವಿಕೋಪ ಎದುರಿಸಲು ಯಾವುದೇ ಅನುದಾನದ ಕೊರತೆ ಇರುವುದಿಲ್ಲ. ಕಷ್ಟ ಕಾಲದಲ್ಲಿ ಪರಿಹಾರ ನೀಡಿದಲ್ಲಿ ಉಪಯುಕ್ತವಾಗಲಿದೆ ಎಂದು ತ್ವರಿತವಾಗಿ ಪರಿಹಾರ ನೀಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಇದನ್ನೂ ಕೂಡ ಓದಿ : Agriculture Loan : ಕೃಷಿ ಕೆಲಸಕ್ಕಾಗಿ ಬಡ್ಡಿ ರಹಿತ ಸಾಲ…! ರೈತರು ಕೂಡಲೇ ಅರ್ಜಿ ಸಲ್ಲಿಸಿ – ಹೇಗೆ ಸಾಲ ಪಡೆಯುವುದು.?
ದಾವಣಗೆರೆ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಶೇ 190 ರಷ್ಟು ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದರಿಂದ ಅನೇಕ ಕೆರೆ, ಕಟ್ಟೆಗಳು ತುಂಬಿವೆ ಮತ್ತು ಬೆಳೆ ನಷ್ಟ ಉಂಟಾಗಿದೆ. ಬೆಳೆ ನಷ್ಟವಾದ ಬಗ್ಗೆ ಜಂಟಿ ಸಮೀಕ್ಷೆ ನಡೆಸಿ ವರದಿ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಲಾಗಿದೆ. ಹಿರೇಮಲ್ಲನಹೊಳೆ ಗ್ರಾಮದಲ್ಲಿ ಕೆರೆ ಕೋಡಿಯಲ್ಲಿ ಅನಧಿಕೃತವಾಗಿ ಮನೆಗಳನ್ನು ನಿರ್ಮಿಸಿದ್ದರಿಂದ ಇಲ್ಲಿನ ಮನೆಗಳಿಗೆ ನೀರು ನುಗ್ಗಿದ್ದು ಇಲ್ಲಿರುವ 35 ಮನೆಗಳನ್ನು ಬೇರೆ ಕಡೆ ಸ್ಥಳಾಂತರಿಸಲು ಸೂಚಿಸಲಾಗಿದ್ದು ಮನೆ ಪರಿಹಾರದ ಜೊತೆಗೆ ಬೇರೆಡೆ ನಿವೇಶನ ನೀಡಿ ಇವರಿಗೆ ಮನೆ ನಿರ್ಮಿಸಿಕೊಡಲಾಗುತ್ತದೆ.
ಇವರಿಗೆ ಮುಂದಿನ ಎರಡು ತಿಂಗಳಲ್ಲಿ ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ಸೂಚಿಸಲಾಗಿದೆ. ಮತ್ತು ಇದೇ ಗ್ರಾಮದಲ್ಲಿ ಮನೆಗಳು ಕುಸಿದಿದ್ದು ಈ ಮನೆಗಳಿಗೂ ಪರಿಹಾರದ ಜೊತೆಗೆ ಬದಲಿ ನಿವೇಶನ ಹಾಗೂ ಮನೆ ನಿರ್ಮಾಣ ಮಾಡಿಕೊಡಲು ತಿಳಿಸಲಾಗಿದೆ ಎಂದರು.
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules
- ಪಿತ್ರಾರ್ಜಿತ ಆಸ್ತಿ ಎಂದು ಪರಿಗಣಿಸುವುದು ಹೇಗೆ.? ಮಕ್ಕಳಿಗೆ ಹಕ್ಕು ಬರುವುದು ಹೇಗೆ.? ಮಹತ್ವದ ಕೋರ್ಟ್ ತೀರ್ಪಿನ ಮಾಹಿತಿ ಇಲ್ಲಿದೆ
- 1 ಎಕರೆಗೆ ಎಷ್ಟು ಗುಂಟೆ.? ಜಮೀನು ಅಳೆಯುವ ಮುನ್ನ ಇಲ್ಲಿದೆ ಪಕ್ಕಾ ಲೆಕ್ಕಾಚಾರ.!
- ತಾತನಿಂದ ತಂದೆಗೆ ಬಂದ ಆಸ್ತಿಯೆಲ್ಲವೂ ಪಿತ್ರಾರ್ಜಿತವಲ್ಲ; ಮಕ್ಕಳಿಗೆ ಜನ್ಮಸಿದ್ಧ ಹಕ್ಕಿಲ್ಲ ಎಂದ ಹೈಕೋರ್ಟ್
- ದಿನ ಭವಿಷ್ಯ (01-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- ಇಂದಿನ ರಾಶಿಭವಿಷ್ಯ : ಉದ್ಯೋಗ, ವ್ಯವಹಾರ, ಕುಟುಂಬ ಜೀವನ ಹೇಗಿರಲಿದೆ.?
- ಧಾರ್ಮಿಕ ವಿಧಿವಿಧಾನವಿಲ್ಲದ ವಿವಾಹ ಅಸಿಂಧು : ಹೈಕೋರ್ಟ್ ಮಹತ್ವದ ತೀರ್ಪು.!
- ಆಧಾರ್, PAN, Voter ID ಇದ್ದರೂ ಭಾರತೀಯ ಪ್ರಜೆ ಎಂದು ಸಾಬೀತಾಗಲ್ಲ! ಹೈಕೋರ್ಟ್ ಶಾಕಿಂಗ್ ತೀರ್ಪು
- ಇಂದಿನ ಅಡಿಕೆ ಬೆಲೆ (31 ಜುಲೈ 2026): ಶಿವಮೊಗ್ಗ, ಕುಂದಾಪುರ, ಪುತ್ತೂರು ಸೇರಿ ಕರ್ನಾಟಕದ ಎಲ್ಲಾ ಪ್ರಮುಖ ಮಾರುಕಟ್ಟೆಗಳ ಸಂಪೂರ್ಣ ದರ
- ಕಿಡ್ನಿ ಫೇಲ್ಯೂರ್ಗೆ ಮುನ್ನ ದೇಹ ನೀಡುವ ಕೊನೆಯ ಎಚ್ಚರಿಕೆ ಇದು! ನಿರ್ಲಕ್ಷಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ!
- ಗೃಹಜ್ಯೋತಿ ಫಲಾನುಭವಿಗಳೇ ಎಚ್ಚರ: ಜುಲೈ ವಿದ್ಯುತ್ ಬಿಲ್ ಬಗ್ಗೆ ಬೆಸ್ಕಾಂನಿಂದ ಹೊಸ ಪ್ರಕಟಣೆ!
- Gold Loan New Rules : ಚಿನ್ನದ ಸಾಲಗಾರರಿಗೆ ಬಿಗ್ ಅಲರ್ಟ್! ಬುಲೆಟ್ ಪಾವತಿ ಬಂದ್? EMI ಕಡ್ಡಾಯಕ್ಕೆ ಹೊಸ ನಿಯಮ ಸಾಧ್ಯತೆ
































