PM Fasal Bima Yojana : ಅರ್ಹ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ಹಾನಿಯಾದರೆ ಬೆಳೆವಿಮೆ ಪರಿಹಾರ ದೊರೆಯುತ್ತದೆ.? ಇದರ ಬಗ್ಗೆ ಸಂಪೂರ್ಣ ಮಾಹಿತಿ

Spread the love

PM Fasal Bima Yojana : ನಮಸ್ಕಾರ ಸ್ನೇಹಿತರೇ, ಬರಪೀಡಿತ ಅಥವಾ ಬೆಳೆ ಹಾನಿ ಪರಿಹಾರವಾಗಿ ಅರ್ಹ ಫಲಾನುಭವಿ ರೈತರಿಗೆ ಯಾವೆಲ್ಲ ಕಾರಣಕ್ಕೆ ಬೆಳೆ ನಷ್ಟವಾದರೆ ಬೆಳೆ ವಿಮೆ ಪರಿಹಾರ ದೊರೆಯುತ್ತದೆ.? ಹಾಗು ಮುಂಗಾರು ಬೆಳೆ ವಿಮೆ ಕಂತು ಪಾವತಿಸುವುದು ಹೇಗೆ.? ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.

WhatsApp Group Join Now

ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) 2024-25 ಸಾಲಿನ ಮುಂಗಾರು ಬೆಳೆಗಳ ವಿಮಾ ನೋಂದಣಿಗೆ ಅರ್ಹ ರೈತರಿಂದ ಅರ್ಜಿಯನ್ನ ಆಹ್ವಾನಿಸಲಾಗಿದೆ. ಮುಂಗಾರು ಹಂಗಾಮಿನಲ್ಲಿ ಒಟ್ಟು 36 ಅಧಿಸೂಚಿತ ಬೆಳೆಗಳು ಈ ವಿಮಾ ಯೋಜನೆಯ ವ್ಯಾಪ್ತಿಗೆ ಬರುತ್ತವೆ.

ಇದನ್ನೂ ಕೂಡ ಓದಿ : Sukanya Samruddhi Yojana : ಈ ಯೋಜನೆಗೆ ಅರ್ಜಿ ಸಲ್ಲಿಸಿ ಹಾಗು ಪಡೆಯಿರಿ ಲಕ್ಷ ಲಕ್ಷ ರೂಪಾಯಿಗಳು! ಹೇಗೆ ಅರ್ಜಿ ಸಲ್ಲಿಸುವುದು.?

WhatsApp Group Join Now

ಬೆಳೆವಾರು ನಿಗದಿಪಡಿಸಿದ ವಿಮಾ ಮೊತ್ತವನ್ನು ರೈತರು ಮುಂಗಾರು ಹಂಗಾಮಿನಲ್ಲಿ ಶೇ.2ರಷ್ಟು (ತೋಟಗಾರಿಕೆ ಬೆಳೆಗಳಿಗೆ ಶೇ.5ರಷ್ಟು) ಮೊತ್ತವನ್ನು ಮಾತ್ರ ಪಾವತಿಸಬೇಕು. ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ರೈತರು ತಮ್ಮ ಬೆಳೆಗಳಿಗೆ ವಿಮೆ ಮಾಡಿಸಿದರೆ ಪ್ರತಿ ಹೆಕ್ಟೇರ್‌ಗೆ ₹29,000 ಯಿಂದ ₹86,000 ವರೆಗೂ ಆಯಾ ಬೆಳೆಗೆ ತಕ್ಕಂತೆ ಬೆಳೆನಷ್ಟ ಪರಿಹಾರ ಪಡೆಯಬಹುದಾಗಿದೆ. ತೋಟಗಾರಿಕೆ ಬೆಳೆಗಳಿಗೆ ಇನ್ನೂ ಹೆಚ್ಚಿನ ಬೆಳೆಹಾನಿ ವಿಮಾ ಪರಿಹಾರ ಸಿಗುತ್ತದೆ.

ಈ ಯೋಜನೆಯಿಂದ ಯಾವೆಲ್ಲ ಬೆಳೆ ನಷ್ಟಕ್ಕೆ ಪರಿಹಾರ ಸಿಗುತ್ತದೆ.?

ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಪ್ರಕೃತಿ ವಿಕೋಪದಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸಲಾಗುತ್ತಿದೆ. ಹಾಲಿ ಇರುವ ಬೆಳೆಗಳಿಗೆ ಬಿತ್ತನೆಯಿಂದ ಕಟಾವಿನ ಹಂತದವರೆಗೆ ಈ ವಿಮಾ ರಕ್ಷಣೆ ಇರುತ್ತದೆ. ವಿಮೆ ಮಾಡಿದ ಕ್ಷೇತ್ರದಲ್ಲಿ ಮಳೆ ಅಭಾವದಿಂದ ಬಿತ್ತನೆ ಅಥವಾ ನಾಟಿ ವಿಫಲವಾದಲ್ಲಿ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ವಿಮಾ ರಕ್ಷಣೆ ಒದಗಿಸಲಿದೆ.

WhatsApp Group Join Now

ಇದನ್ನೂ ಕೂಡ ಓದಿ : Gruhalakshmi Payment : ಗೃಹಲಕ್ಷ್ಮಿ ಯೋಜನೆಯ 11ನೇ ಕಂತಿನ ಹಣ ಈ ಜಿಲ್ಲೆಗಳಿಗೆ ಬಿಡುಗಡೆ.! ಹೊಸ ಅಪ್ಡೇಟ್ ಏನು.?

ಬರ, ಶುಷ್ಕ ಪರಿಸ್ಥಿತಿ, ನೆರೆ, ಪ್ರವಾಹಗಳಿಂದ ಬೆಳೆ ಮುಳಗಡೆ, ಗುಡುಗು ಮಿಂಚುಗಳಿಂದ ಉಂಟಾಗುವ ಬೆಂಕಿ ಅವಘಡ, ಭೂಕುಸಿತ, ಬಿರುಗಾಳಿ, ಚಂಡಮಾರುತ ಸಹಿತ ಮಳೆ, ಅಕಾಲಿಕ ಮಳೆಯಿಂದ ನಷ್ಟ ಸಂಭವಿಸಿದಲ್ಲಿ ಸಮಗ್ರ ವಿಮಾ ಭದ್ರತೆಯನ್ನು ಒದಗಿಸುವುದು ಹಾಗೂ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲಿ ಒಣಗಲು ಬಿಟ್ಟ ಸಂದರ್ಭದಲ್ಲಿ ಅಂದರೆ ಸುಮಾರು 14 ದಿನಗಳವರೆಗೆ ಆಲಿಕಲ್ಲು ಮಳೆ, ಚಂಡಮಾರುತ ಸಹಿತ ಮಳೆ ಅಥವಾ ಅಕಾಲಿಕ ಮಳೆಯಿಂದ ಬೆಳೆ ನಷ್ಟವಾದರೂ ಕೂಡ ಈ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ನಷ್ಟ ಪರಿಹಾರ ಒದಗಿಸಲಾಗುತ್ತದೆ.

ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಹೇಗೆ ಬೆಳೆ ವಿಮೆ ನೋಂದಣಿ ಮಾಡಿಕೊಳ್ಳುವುದು.?

ನಿಮ್ಮ ಹತ್ತಿರದ ಗ್ರಾಮ ಒನ್, ಸಾಮಾನ್ಯ ಸೇವಾ ಕೇಂದ್ರ, ಕರ್ನಾಟಕ ಒನ್ ಅಥವಾ ಬ್ಯಾಂಕ್‌ಗಳಲ್ಲಿ ವಿಮಾ ಪ್ರಸ್ತಾವನೆ, ಪಹಣಿ, ಚಾಲ್ತಿ ಬ್ಯಾಂಕ್ ಪಾಸ್ ಪುಸ್ತಕ, ಮೊಬೈಲ್ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊಂದಿಗೆ ಪ್ರೀಮಿಯಂ ಪಾವತಿಸಿ ವಿಮೆಗೆ ನೋಂದಾಯಿಸಿಕೊಳ್ಳಲು ಅವಕಾಶ ಇದೆ.

ಇದನ್ನೂ ಕೂಡ ಓದಿ : Govt Updates : ಎಲ್ಲಾ ಸಾರ್ವಜನಿಕರಿಗೆ ಬಂಪರ್ | ಜುಲೈ 1 ರಿಂದ 4 ಹೊಸ ರೂಲ್ಸ್ ಜಾರಿ | ಪೆಟ್ರೋಲ್ ಡೀಸೆಲ್, ಎಲ್ಪಿಜಿ ಗ್ಯಾಸ್, ಸಿಮ್ ಕಾರ್ಡ್

ಈಗಾಗಲೇ ಬೆಳೆವಾರು ಬೆಳೆ ವಿಮೆ ಕಂತು ಮಾಡಿಸಿದ ರೈತರಿಗೆ ವಿಮಾ ಕಂಪನಿ ಆದ್ಯತೆ ಮೇರೆಗೆ ಪರಿಹಾರ ಧನವನ್ನು ಬಿಡುಗಡೆ ಮಾಡಲಾಗುತ್ತದೆ. ಆದರೆ ಪ್ರಸ್ತುತ ಸಾಲಿನ ಬೆಳೆ ವಿಮೆ ಅರ್ಜಿಯನ್ನು ರೈತರು ಕಾಲಮಿತಿಯಲ್ಲಿ ತುಂಬಿದರೆ ಮಾತ್ರ ವಿವಿಧ ಕಾರಣಕ್ಕೆ ಬೆಳೆ ನಷ್ಟವಾದಲ್ಲಿ ಮಾತ್ರ ಪಿಎಂ ಫಸಲ್ ಬಿಮಾ ಯೋಜನೆಯಡಿ (PM Fasal Bima Yojana) ಈ ಪರಿಹಾರ ಹಣ ಅರ್ಹ ರೈತ ಫಲಾನುಭವಿಗಳಿಗೆ ಸಿಗಲಿದೆ.

ಹೆಚ್ಚಿನ ಮಾಹಿತಿಗಾಗಿ ನೀವು ನಿಮ್ಮ ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದು. ಉಚಿತ ಸಹಾಯವಾಣಿ 1800180 1551 ನಂಬರಿಗೆ ಕರೆ ಮಾಡುವ ಮೂಲಕ ನಿಮ್ಮ ಜಿಲ್ಲೆಗೆ ನಿಗದಿಯಾಗಿರುವ ಬೆಳೆ ವಿಮಾ ಕಂಪನಿಯ ಸಿಬ್ಬಂದಿಯ ಮೊಬೈಲ್ ನಂಬರ್ ಪಡೆದು ವಿವರವಾದ ಮಾಹಿತಿಯನ್ನ ನೀವು ಪಡೆದುಕೊಳ್ಳಬಹುದಾಗಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.


Spread the love

Leave a Reply