ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ : ಪ್ರತಾಪ್‌ ಸಿಂಹ ಕಿಡಿ

Spread the love

ಬೆಲೆ ಏರಿಕೆ ವಿರುದ್ದ ದನಿ ಎತ್ತಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯರನ್ನು ಬಂಧನ ಮಾಡಿದ್ದಾರೆ. ಇದರಿಂದ ಸಿದ್ದರಾಮಯ್ಯ ಎಷ್ಟು ಪುಕ್ಕಲ, ಹೇಡಿ ಸಿಎಂ ಎಂದು ಗೊತ್ತಾಗುತ್ತದೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದರು.

ಸೋಮವಾರ (ಫೆ.09) ಹರಿಹರದ ರಾಜನಹಳ್ಳಿ ವಾಲ್ಮೀಕಿ ಪೀಠದಲ್ಲಿ ಮಾತನಾಡಿದ ಅವರು, ಒಂದು ವರ್ಷದಲ್ಲಿ ಎರಡು ಬಾರಿ ಮೆಟ್ರೋ ದರ ಏರಿಕೆ ಮಾಡಿದ್ದಾರೆ.

ಜನರ ತಾಳ್ಮೆಯನ್ನು ತಡೆಯಲು ಆಗುವುದಿಲ್ಲ ಎಂದು ತೇಜಸ್ವಿ ಸೂರ್ಯ ಹೋರಾಟ ಮಾಡಿದ್ದಾರೆ. ಹೋರಾಟ ಮಾಡಿ ದರ ಏರಿಕೆಯನ್ನು ತಡೆ ಹಿಡಿದಿದ್ದಾರೆ. ಮೆಟ್ರೋ ಅಭಿವೃದ್ಧಿಗೆ ಕೇಂದ್ರ ಸರ್ಕಾರಿಂದ ಅನುದಾನ ಬರುತ್ತಿದೆ. ಆದರೆ ರಾಜ್ಯ ಸರ್ಕಾರ ಬಜೆಟ್ ನಲ್ಲಿ ಮೆಟ್ರೋ ಗೆ ಅನುದಾನ ನೀಡದೆ ದರ ಏರಿಕೆ ಮಾಡಿದ್ದಾರೆ. ಇದರ ವಿರುದ್ದ ಸಂಸದ ತೇಜಸ್ವಿ ಸೂರ್ಯ ಹೋರಾಟ ಮಾಡಿ ನ್ಯಾಯ ಕೊಡಿಸಿದ್ದಾರೆ ಎಂದರು.

ಈಗ ಖಜಾನೆ ಖಾಲಿಯಾಗಿದೆ ಎಂದು ಖಾಲಿ ಡಬ್ಬಿ ಹಿಡಿದು ತೇಜಸ್ವಿ ಸೂರ್ಯ ಸಾಂಕೇತಿಕವಾಗಿ ಪ್ರತಿಭಟನೆ ಮಾಡಿದ್ದಾರೆ. ಅವರನ್ನು ಬಂಧನ ಮಾಡುವ ಕೆಲಸವನ್ನು ಈ ಸರ್ಕಾರ ಮಾಡಿದೆ. ಅವರ ವೈಫಲ್ಯ ತೋರಿಸಿದವರನ್ನು ಯಾವ ರೀತಿ ಹತ್ತಿಕ್ಕುತ್ತಾರೆ ಎನ್ನುವುದಕ್ಕೆ ಇದೇ ಉದಾಹರಣೆ. ತೇಜಸ್ವಿ ಸೂರ್ಯ ಸಮಸ್ತ ಬೆಂಗಳೂರಿಗರ ಪರವಾಗಿ ಹೋರಾಟ ಮಾಡಿದ್ದಾರೆ ಎಂದರು.

ಸಿದ್ದರಾಮಯ್ಯನವರು 17 ಬಜೆಟ್ ಮಂಡನೆ ಮಾಡಿ ವಿಶ್ವ ಪ್ರಖ್ಯಾತ ಅರ್ಥಶಾಸ್ತ್ರಜ್ಞರು ಆಗಿದ್ದಾರೆ. ಖಜಾನೆ ಖಾಲಿಯಾಗಿ ಅಭಿವೃದ್ಧಿ ಕೆಲಸಕ್ಕೆ ಹಣ ಕೊಡದ ಪರಿಸ್ಥಿತಿ ಇದೆ. ಬರೀ ಸಭೆ ಸಮಾರಂಭಗಳಲ್ಲಿ ಏಕವಚನದ ಉಡಾಫೆ ಮಾತನಾಡುವುದು ಬಿಟ್ಟು ಏನು ಗೊತ್ತಿಲ್ಲ. 17 ಬಜೆಟ್ ಮಂಡನೆ ಮಾಡಿದ ನಿಮಗೆ ಅರ್ಥಿಕ ವ್ಯವಸ್ಥೆಯ ಗಂಧಗಾಳಿ ಗೊತ್ತಿಲ್ಲ. ಒಬ್ಬ ಯುವ ಸಂಸದ ನಿಮ್ಮನ್ನು ಪ್ರಶ್ನೆ ಮಾಡಿದರೆ ಅರೆಸ್ಟ್ ಮಾಡಿಸುತ್ತೀರಿ. ಕರ್ನಾಟಕ ಕಂಡ ಅತ್ಯಂತ ಪುಕ್ಕಲ ಹೇಡಿ ಮುಖ್ಯಮಂತ್ರಿ ನೀವು ಎಂದು ಪ್ರತಾಪ್‌ ಸಿಂಹ ವಾಗ್ದಾಳಿ ನಡೆಸಿದರು.

WhatsApp Group Join Now

Spread the love

Leave a Reply