Crime News : ತಮಿಳುನಾಡಿನ ಜೋಲಾರ್ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗರ್ಭಿಣಿ ಎಂದು ಬೇಡಿಕೊಂಡರು ಬಿಡದ ಪಾಪಿ:
ವರದಿಯ ಪ್ರಕಾರ, ಚಲಿಸುತ್ತಿದ್ದ ರೈಲಿನಲ್ಲಿ ಇತರ ಮಹಿಳಾ ಪ್ರಯಾಣಿಕರು ಹೋದ ನಂತರ ಆರೋಪಿಯು ಮಹಿಳಾ ಬೋಗಿಯನ್ನು ಹತ್ತಿದ್ದ ಎಂದು ಮಹಿಳೆ ತನ್ನ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇದು ಮಹಿಳಾ ಬೋಗಿಯಾಗಿರುವುದರಿಂದ ನಾನು ಅವನನ್ನು ಕೆಳಗಿಳಿಯಲು ಕೇಳಿದಾಗ, ರೈಲು ಈಗಾಗಲೇ ಚಲಿಸಲು ಪ್ರಾರಂಭಿಸಿದೆ ಮತ್ತು ಮುಂದಿನ ನಿಲ್ದಾಣದಲ್ಲಿ ಇಳಿಯುವುದಾಗಿ ಅವನು ಹೇಳಿದನು. ನಾನು ಸರಿ ಎಂದು ಹೇಳಿದೆ. ಆದರೆ ಆ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಹೇಳಿದರು. ಅರ್ಧ ಗಂಟೆ ಆ ವ್ಯಕ್ತಿ ಮೌನವಾಗಿದ್ದ. ನಂತರ, ಅವನು ಬಾತ್ರೂಮ್ ನಿಂದ ಬೆತ್ತಲೆಯಾಗಿ ಬಂದು ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದನು. ನಾನು ಗರ್ಭಿಣಿ ಮತ್ತು ನಾನು ನಿಮ್ಮ ಸಹೋದರಿಯಂತೆ ಎಂದು ಹೇಳುತ್ತಾ ಬೇಡಿಕೊಂಡರೂ ಪಾಪಿ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದೌರ್ಜನ್ಯವೆಸಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ.
ಮಹಿಳೆಯ ತಲೆಗೆ 20 ಹೊಲಿಗೆ
ಇನ್ನು, ಶನಿವಾರ ಮಧ್ಯಾಹ್ನ ವೈದ್ಯರು ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆದರೆ ದುರಾದೃಷ್ಟವಶಾತ್ ಗರ್ಭಪಾತವಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅವರ ಪತಿ ವರದಿಗಾರರಿಗೆ ಮಾಹಿತಿ ನೀಡಿದರು. ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಭ್ರೂಣವು ಸಾಮಾನ್ಯವಾಗಿತ್ತು. ಆದರೆ ಮಹಿಳೆ ಸ್ಥಿತಿ ಹದಗೆಟ್ಟಿತು. ಶನಿವಾರ ಭ್ರೂಣದ ಹೃದಯ ಬಡಿತ ಕಡಿಮೆಯಾದ ಕಾರಣ ಗರ್ಭಪಾತವಾಗಿದೆ ಎಂದು ಹೇಳಿದ್ದಾರೆ. ಇನ್ನು, ಮಹಿಳೆಯ ಕೈಕಾಲುಗಳು ಮತ್ತು ತಲೆಯಲ್ಲಿ ಮುರಿತಗಳು ಸೇರಿದಂತೆ ತೀವ್ರವಾದ ಗಾಯಗಳಾಗಿದ್ದು, ಆಕೆಯ ತಲೆಯ ಮೇಲೆ 20 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಯಾಗಿದೆ.
ಆರೋಪಿ ಹೇಮರಾಜ್ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ 30 ವರ್ಷದ ಹೇಮರಾಜ್ ಎಂದು ಗುರುತಿಸಲಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು 12 ಗಂಟೆಗಳ ಒಳಗೆ ಪತ್ತೆಹಚ್ಚಲಾಯಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ದಕ್ಷಿಣ ರೈಲ್ವೆ ಮಹಿಳೆಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಮಹಿಳಾ ಪ್ರಯಾಣಿಕನ ಮೇಲೆ ದುಷ್ಕರ್ಮಿ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಆದರೆ ಆಕೆ ಧೈರ್ಯದಿಂದ ವಿರೋಧಿಸಿದ್ದಾಳೆ ಎಂದು ದಕ್ಷಿಣ ರೈಲ್ವೆ ಮುಖ್ಯಸ್ಥ ಪಿಆರ್ಒ ಎಂ. ಸೆಂಥಮಿಲ್ ಸೆಲ್ವನ್ ಹೇಳಿದ್ದಾರೆ. ನಾನು ಸುಮಾರು 30 ನಿಮಿಷಗಳ ಕಾಲ ಹೋರಾಡಿದೆ. ನಾನು ಎದುರಿಸಿದ ಘಟನೆಯನ್ನು ಬೇರೆ ಯಾವುದೇ ಮಹಿಳೆ ಎದುರಿಸಬಾರದು. ದಯವಿಟ್ಟು ಅವನನ್ನು ಶಿಕ್ಷಿಸಿ. ಈ ಸೈಕೋನನ್ನು ಹೊರಗೆ ಬಿಡಬೇಡಿ ಎಂದು ಮಹಿಳೆ ಕೇಳಿಕೊಂಡಿದ್ದಾಳೆ.
- Horoscope Today : 23 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- Horoscope Today : 22 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಹೆತ್ತ ಕರುಳಿನ ಕಣ್ಣೆದುರೇ ಮಗುವಿನ ಮೇಲೆ ಹರಿದ ಲಾರಿ! ವಿಲವಿಲ ಒದ್ದಾಡಿ ಪ್ರಾಣ ಬಿಟ್ಟ 4 ವರ್ಷದ ಕಂದಮ್ಮ
- ಹಳೇ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸುವವರ ಗಮನಕ್ಕೆ.. ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್!
- Horoscope Today : 21 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ತಾನೆಲ್ಲಿ ಕೊಲೆಯಾಗ್ತಿನೋ ಅನ್ನೋ ಭಯಕ್ಕೆ ಹೆಂಡತಿಯನ್ನು ಪ್ರಿಯಕರನ ಜೊತೆ ಕಳಿಸಿಕೊಟ್ಟ ಪತಿರಾಯ
- ಕುತ್ತಿಗೆಗೆ ಸುತ್ತಿಕೊಂಡಿದ್ದ ನಾಗರಹಾವು ಕಚ್ಚಿ ಉರಗ ರಕ್ಷಕ ಸಾವು : ವಿಡಿಯೋ ವೈರಲ್ | WATCH Video
- ನಿಮ್ಮ ‘ಇನ್ವರ್ಟರ್ ಬ್ಯಾಟರಿ’ಗೆ ನೀರು ಯಾವಾಗ ಸೇರಿಸ್ಬೇಕು.? 90% ಜನರಿಗೆ ಸರಿಯಾದ ಸಮಯ ತಿಳಿದಿಲ್ಲ!
- 75ನೇ ವಯಸ್ಸಿನಲ್ಲೂ ಕಾಮದಾಹ: ಸೊಸೆಯನ್ನೂ ಬಿಡದ ಕಾಮುಕ ತಂದೆಯನ್ನ ಕೊಂದ ಮಗ
- ಸರ್ಕಾರಿ ನೌಕರಿ, ಕೈತುಂಬಾ ಸಂಬಳ ಬರುತ್ತಿದ್ದರೂ 8 ವರ್ಷದ ಮಗಳನ್ನ ಚೆನ್ನೈ ಎಕ್ಸ್ಪ್ರೆಸ್ ರೈಲಿಗೆ ತಳ್ಳಿದ ತಾಯಿ!
- ಹಬ್ಬ ಸಂಭ್ರಮದ ನಡುವೆ ಆಸಿಡ್ ಎರಚಿದ ಸುಹಿಲ್ ಭಾಷಾ ; ಮಗು ಸೇರಿ ಐವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರ.!
- Horoscope Today : 20 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಕಾಂಗ್ರೆಸ್ ಜತೆ ವಿಚ್ಛೇದನಕ್ಕೆ ಕಾರಣ ಬಿಚ್ಚಿಟ್ಟ ಎಚ್ಡಿ ದೇವೇಗೌಡ: ಪ್ರೀತಿಯಲ್ಲ, ಬಲವಂತದ ಮದುವೆ; ಹಿಂಸೆ ಕಿರುಕುಳವಿತ್ತು!
- ಧಾರ್ಮಿಕ ಮೆರವಣಿಗೆ, ಜಯಂತಿಗಳಲ್ಲಿ DJ ಸದ್ದಿಗೆ ಬ್ರೇಕ್.? ‘ಐಟಂ ಸಾಂಗ್’ ಬ್ಯಾನ್ ಮಾಡಲು ರಾಜ್ಯ ಸರ್ಕಾರ ಒಲವು
- 19 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಈ ಸೂಪರ್ಫುಡ್ ಸೇವಿಸಿದ್ರೆ ಫ್ಯಾಟಿ ಲಿವರ್ ಸಮಸ್ಯೆಯಿಂದ ಸಿಗುತ್ತೆ ಮುಕ್ತಿ…
- ಕಣ್ಣಿನ ಕ್ಯಾನ್ಸರ್ ಆರಂಭಿಕ ಲಕ್ಷಣಗಳನ್ನು ಹೇಗೆ ಗುರುತಿಸುವುದು.? ಸಂಪೂರ್ಣ ಮಾಹಿತಿ
- Horoscope Today : 18 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಯುವಕನ ಪ್ರಾಣವನ್ನೇ ಬಲಿ ಪಡೆದ ಸ್ನೇಹಿತನ ಸಹೋದರಿ ಜೊತೆಗಿನ ಅಕ್ರಮ ಸಂಬಂಧ: ಗೆಳೆಯನಿಂದಲೇ ನಡೀತು ಭೀಕರ ಹತ್ಯೆ
- ‘ಟೆನ್ಷನ್’ನಿಂದ ಬಿಪಿ ಹೆಚ್ಚಾಗಿ `ಬ್ರೈನ್ ಸ್ಟ್ರೋಕ್’ ಬರುತ್ತೆ ಎಚ್ಚರ.! ಭಾರತದ ಶೇ.60 ರಷ್ಟು ಉದ್ಯೋಗಿಗಳಲ್ಲಿ ಈ ಗಂಭೀರ ಸಮಸ್ಯೆ.!
- Horoscope Today : 17 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ
- ಪಾದಗಳಲ್ಲಿ ಜುಮ್ಮೆನ್ನುತ್ತಿದೆಯೇ? ಇದು ಕೇವಲ ಸುಸ್ತಲ್ಲ, ಮಧುಮೇಹದ ಆರಂಭಿಕ ಲಕ್ಷಣವಿರಬಹುದು
- ಖಾಸಗಿ ಅಂಗದಲ್ಲಿ ‘ನೀರಿನ ಬಾಟಲ್’ ಸೇರಿಸಿಕೊಂಡ ವ್ಯಕ್ತಿ : ‘ಎಕ್ಸ್ ರೇ’ ನೋಡಿ ವೈದ್ಯರೇ ಶಾಕ್ !
- ನಿಮ್ಮ ಕಣ್ಣುಗಳಲ್ಲಿ ಈ ಲಕ್ಷಣಗಳು ಕಾಣಿಸಿಕೊಂದ್ರೆ ದೇಹದ ʼಆʼ ಭಾಗಕ್ಕೆ ಹಾನಿಯಾಗಿದೆ ಎಂದರ್ಥ!
- ಬೆಳಿಗ್ಗೆ ತಪ್ಪಾಗಿಯಾದರೂ ಈ 3 ತಪ್ಪುಗಳನ್ನು ಮಾಡಬೇಡಿ.. ಹೀಗೆ ಮಾಡುವುದರಿಂದ ಲಿವರ್ಗೆ ಕಂಟಕ ಫಿಕ್ಸ್
- ನಿಮ್ಮ ಮನೆಯ ಫ್ರಿಡ್ಜ್ನಿಂದ ಅತಿಯಾದ ಕರೆಂಟ್ ಬಿಲ್ ಬರುತ್ತಿದೆಯೇ.? ಕಡಿಮೆ ಮಾಡಲು ಇಲ್ಲಿವೆ ಸಿಂಪಲ್ ಟಿಪ್ಸ್
- Horoscope Today : 16 ಮಾರ್ಚ್ 2026 ರಂದು ಯಾವ ರಾಶಿಗೆ ಶುಭ.? ಯಾವ ರಾಶಿಗೆ ಅಶುಭ.? : 12 ರಾಶಿ ಭವಿಷ್ಯ ಇಲ್ಲಿದೆ


























