Crime News : ತಮಿಳುನಾಡಿನ ಜೋಲಾರ್ಪೇಟೆ ಬಳಿ ಚಲಿಸುವ ರೈಲಿನಿಂದ ನಾಲ್ಕು ತಿಂಗಳ ಗರ್ಭಿಣಿ ಮಹಿಳೆ ಮೇಲೆ ಅತ್ಯಾಚಾರವೆಸಗಲು ಪ್ರಯತ್ನಿಸಿ, ತಳ್ಳಿ ಗಂಭೀರ ಗಾಯಗೊಳಿಸಲಾಗಿದೆ. ಕೊಯಮತ್ತೂರಿನಲ್ಲಿ ಟೇಲರಿಂಗ್ ಮಾಡುತ್ತಿದ್ದ ಸಂತ್ರಸ್ತೆ ಕೊಯಿಮತ್ತೂರ್-ತಿರುಪತಿ ಇಂಟರ್ಸಿಟಿ ಎಕ್ಸ್ಪ್ರೆಸ್ನಲ್ಲಿ ಚಿತ್ತೂರಿಗೆ ಪ್ರಯಾಣಿಸುತ್ತಿದ್ದಾಗ, ಮಹಿಳೆಯರ ವಿಭಾಗದಲ್ಲಿದ್ದ ವ್ಯಕ್ತಿಯೊಬ್ಬರು ಆಕೆಯ ಮೇಲೆ ಹಲ್ಲೆ ನಡೆಸಿ ಅತ್ಯಾಚಾರವೆಸಗಿದ್ದಾರೆ ಎಂದು ಆರೋಪಿಸಲಾಗಿದೆ.
ಸದ್ಯ 36 ವರ್ಷದ ಗರ್ಭಿಣಿ ಮಹಿಳೆ ಶನಿವಾರ ಗರ್ಭಪಾತಕ್ಕೊಳಗಾಗಿದ್ದಾರೆ. TOI ವರದಿಯ ಪ್ರಕಾರ, 4 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಎರಡು ದಿನಗಳ ಹಿಂದೆ ನಡೆದ ಹಲ್ಲೆಯ ನಂತರ ವೆಲ್ಲೂರಿನ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಗರ್ಭಿಣಿ ಎಂದು ಬೇಡಿಕೊಂಡರು ಬಿಡದ ಪಾಪಿ:
ವರದಿಯ ಪ್ರಕಾರ, ಚಲಿಸುತ್ತಿದ್ದ ರೈಲಿನಲ್ಲಿ ಇತರ ಮಹಿಳಾ ಪ್ರಯಾಣಿಕರು ಹೋದ ನಂತರ ಆರೋಪಿಯು ಮಹಿಳಾ ಬೋಗಿಯನ್ನು ಹತ್ತಿದ್ದ ಎಂದು ಮಹಿಳೆ ತನ್ನ ಭಯಾನಕ ಅನುಭವವನ್ನು ಬಿಚ್ಚಿಟ್ಟಿದ್ದಾರೆ. ಇದು ಮಹಿಳಾ ಬೋಗಿಯಾಗಿರುವುದರಿಂದ ನಾನು ಅವನನ್ನು ಕೆಳಗಿಳಿಯಲು ಕೇಳಿದಾಗ, ರೈಲು ಈಗಾಗಲೇ ಚಲಿಸಲು ಪ್ರಾರಂಭಿಸಿದೆ ಮತ್ತು ಮುಂದಿನ ನಿಲ್ದಾಣದಲ್ಲಿ ಇಳಿಯುವುದಾಗಿ ಅವನು ಹೇಳಿದನು. ನಾನು ಸರಿ ಎಂದು ಹೇಳಿದೆ. ಆದರೆ ಆ ಬೋಗಿಯಲ್ಲಿ ಬೇರೆ ಯಾರೂ ಇರಲಿಲ್ಲ ಎಂದು ಹೇಳಿದರು. ಅರ್ಧ ಗಂಟೆ ಆ ವ್ಯಕ್ತಿ ಮೌನವಾಗಿದ್ದ. ನಂತರ, ಅವನು ಬಾತ್ರೂಮ್ ನಿಂದ ಬೆತ್ತಲೆಯಾಗಿ ಬಂದು ನನ್ನ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸಿದನು. ನಾನು ಗರ್ಭಿಣಿ ಮತ್ತು ನಾನು ನಿಮ್ಮ ಸಹೋದರಿಯಂತೆ ಎಂದು ಹೇಳುತ್ತಾ ಬೇಡಿಕೊಂಡರೂ ಪಾಪಿ ಗರ್ಭಿಣಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ದೌರ್ಜನ್ಯವೆಸಗಿದ್ದಾಗಿ ಮಹಿಳೆ ಹೇಳಿಕೊಂಡಿದ್ದಾಳೆ.
ಮಹಿಳೆಯ ತಲೆಗೆ 20 ಹೊಲಿಗೆ
ಇನ್ನು, ಶನಿವಾರ ಮಧ್ಯಾಹ್ನ ವೈದ್ಯರು ಮಹಿಳೆ ಚೇತರಿಸಿಕೊಳ್ಳುತ್ತಿದ್ದು, ಆದರೆ ದುರಾದೃಷ್ಟವಶಾತ್ ಗರ್ಭಪಾತವಾಗಿರುವುದನ್ನು ದೃಢಪಡಿಸಿದ್ದಾರೆ ಎಂದು ಅವರ ಪತಿ ವರದಿಗಾರರಿಗೆ ಮಾಹಿತಿ ನೀಡಿದರು. ಗುರುವಾರ ಅವರನ್ನು ಆಸ್ಪತ್ರೆಗೆ ದಾಖಲಿಸಿದಾಗ ಭ್ರೂಣವು ಸಾಮಾನ್ಯವಾಗಿತ್ತು. ಆದರೆ ಮಹಿಳೆ ಸ್ಥಿತಿ ಹದಗೆಟ್ಟಿತು. ಶನಿವಾರ ಭ್ರೂಣದ ಹೃದಯ ಬಡಿತ ಕಡಿಮೆಯಾದ ಕಾರಣ ಗರ್ಭಪಾತವಾಗಿದೆ ಎಂದು ಹೇಳಿದ್ದಾರೆ. ಇನ್ನು, ಮಹಿಳೆಯ ಕೈಕಾಲುಗಳು ಮತ್ತು ತಲೆಯಲ್ಲಿ ಮುರಿತಗಳು ಸೇರಿದಂತೆ ತೀವ್ರವಾದ ಗಾಯಗಳಾಗಿದ್ದು, ಆಕೆಯ ತಲೆಯ ಮೇಲೆ 20 ಹೊಲಿಗೆಗಳನ್ನು ಹಾಕಲಾಗಿದೆ ಎಂದು ವರದಿಯಾಗಿದೆ.
ಆರೋಪಿ ಹೇಮರಾಜ್ ಬಂಧನ
ವೆಲ್ಲೂರಿನ ಕೆವಿ ಕುಪ್ಪಂನ 30 ವರ್ಷದ ಹೇಮರಾಜ್ ಎಂದು ಗುರುತಿಸಲಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳನ್ನು ಬಳಸಿಕೊಂಡು 12 ಗಂಟೆಗಳ ಒಳಗೆ ಪತ್ತೆಹಚ್ಚಲಾಯಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಈ ಹಿಂದೆ ಕೊಲೆ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣಗಳಲ್ಲಿ ಆತ ಜಾಮೀನಿನ ಮೇಲೆ ಹೊರಬಂದಿದ್ದ ಎಂದು ತಿಳಿದುಬಂದಿದೆ. ಏತನ್ಮಧ್ಯೆ, ದಕ್ಷಿಣ ರೈಲ್ವೆ ಮಹಿಳೆಗೆ 50,000 ರೂ. ಪರಿಹಾರ ಘೋಷಿಸಿದ್ದಾರೆ. ಮಹಿಳಾ ಪ್ರಯಾಣಿಕನ ಮೇಲೆ ದುಷ್ಕರ್ಮಿ ಹಲ್ಲೆ ನಡೆಸಿ ಲೈಂಗಿಕ ಕಿರುಕುಳ ನೀಡಿದ್ದಾನೆ.
ಆದರೆ ಆಕೆ ಧೈರ್ಯದಿಂದ ವಿರೋಧಿಸಿದ್ದಾಳೆ ಎಂದು ದಕ್ಷಿಣ ರೈಲ್ವೆ ಮುಖ್ಯಸ್ಥ ಪಿಆರ್ಒ ಎಂ. ಸೆಂಥಮಿಲ್ ಸೆಲ್ವನ್ ಹೇಳಿದ್ದಾರೆ. ನಾನು ಸುಮಾರು 30 ನಿಮಿಷಗಳ ಕಾಲ ಹೋರಾಡಿದೆ. ನಾನು ಎದುರಿಸಿದ ಘಟನೆಯನ್ನು ಬೇರೆ ಯಾವುದೇ ಮಹಿಳೆ ಎದುರಿಸಬಾರದು. ದಯವಿಟ್ಟು ಅವನನ್ನು ಶಿಕ್ಷಿಸಿ. ಈ ಸೈಕೋನನ್ನು ಹೊರಗೆ ಬಿಡಬೇಡಿ ಎಂದು ಮಹಿಳೆ ಕೇಳಿಕೊಂಡಿದ್ದಾಳೆ.
- Post Office Scheme : ಹಿರಿಯ ನಾಗರಿಕರಿಗೆ ಜನಪ್ರಿಯ ‘ಪೋಸ್ಟ್ ಆಫೀಸ್’ ಯೋಜನೆ, ಪ್ರತಿ ತಿಂಗಳು ಸಿಗಲಿದೆ ₹20,000/- ರೂಪಾಯಿ.!
- ಮೂತ್ರದಲ್ಲಿ ರಕ್ತ ಕಾಣಿಸಿಕೊಳ್ಳುವುದು ಕಿಡ್ನಿ ಕ್ಯಾನ್ಸರ್ ಸೂಚಕವೇ.? ಯಾವಾಗ ವೈದ್ಯರ ಸಲಹೆ ಪಡೆಯಬೇಕು
- ಮಹಿಳೆಯರೇ ಎಚ್ಚರ : ಅಪ್ಪಿತಪ್ಪಿಯೂ ‘ಫ್ರಿಡ್ಜ್’ ಪಕ್ಕದಲ್ಲಿ ಈ ವಸ್ತುಗಳನ್ನು ಇಡಬೇಡಿ.!
- ಮಹಿಳೆಯರೇ ಎಚ್ಚರ : ‘ತಲೆ ಕೂದಲು’ ಕೊಟ್ಟು ಪಾತ್ರೆ ಖರೀದಿಸುವವರು ತಪ್ಪದೇ ಇದನ್ನೊಮ್ಮೆ ಓದಿ.!
- Post Office Scheme : ಪೋಸ್ಟ್ ಆಫೀಸ್ನಿಂದ ಬಂಪರ್ ಅವಕಾಶ – 8.2% ವರೆಗೆ ಬಡ್ಡಿ : ಯಾವ ಯೋಜನೆಗೆ ಎಷ್ಟು ಬಡ್ಡಿ.?
- Karnataka Weather: ರಾಜ್ಯದಲ್ಲಿ ಮಳೆ ಮುಂದುವರಿಕೆ; ಕರಾವಳಿ ಸೇರಿ ಹಲವು ಭಾಗಗಳಲ್ಲಿ ಗುಡುಗು-ಮಿಂಚಿನ ಎಚ್ಚರಿಕೆ
- Bengaluru Power Cut: ಬೆಂಗಳೂರಿನ 70ಕ್ಕೂ ಅಧಿಕ ಪ್ರದೇಶಗಳಲ್ಲಿ ಇಂದು ವಿದ್ಯುತ್ ವ್ಯತ್ಯಯ
- ಕಾವೇರಿ ನೀರು ವಿವಾದ ಮತ್ತೆ ಬಿಸಿ: KRSನಿಂದ ತಮಿಳುನಾಡಿಗೆ ನೀರು ಬಿಟ್ಟರಾ.? ಸಚಿವರ ಸ್ಪಷ್ಟನೆ
- Bigg Boss Kannada 13: ‘ಅಗ್ನಿಪರೀಕ್ಷೆ’ ಬಗ್ಗೆ ಭಾರೀ ಕುತೂಹಲ; ಸ್ಪರ್ಧಿಗಳ ಆಯ್ಕೆ ಹೇಗೆ?
- ನಾಗರ ಪಂಚಮಿ 2026: ಆಗಸ್ಟ್ 17ರಂದು ಹಬ್ಬ, ಪೂಜೆ ಸಮಯ ಯಾವುದು? ಏನು ಮಾಡಬೇಕು, ಏನು ಮಾಡಬಾರದು.?
- ಐಷಾರಾಮಿ ಹೋಟೆಲ್ನಲ್ಲಿ ಇಬ್ಬರು ಪುತ್ರಿಯರನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ತಂದೆ
- SBI Bank Updates : ‘ಎಸ್ ಬಿಐ’ ಗ್ರಾಹಕರಿಗೆ ಭರ್ಜರಿ ಸಿಹಿಸುದ್ಧಿ – ಇನ್ಮುಂದೆ ಕೇವಲ 15 ನಿಮಿಷದಲ್ಲೇ ‘ಸಾಲ’ ಲಭ್ಯ – ಸಂಪೂರ್ಣ ಮಾಹಿತಿ
- Driving Licence : ಇನ್ಮೇಲೆ ಡ್ರೈವಿಂಗ್ ಲೈಸನ್ಸ್ ಪಡೆಯಲು ಹೊಸ ಆದೇಶ ಜಾರಿಗೊಳಿಸಿದ ಸಂಚಾರ ಸಾರಿಗೆ ಇಲಾಖೆ! ಸಂಪೂರ್ಣ ಮಾಹಿತಿ
- ಬಿಪಿಎಲ್ ಕಾರ್ಡ್ ಇದ್ದವರಿಗೆ ₹30,000/- ರೂಪಾಯಿ ಸಹಾಯಧನ.! ಹೇಗೆ ಅರ್ಜಿ ಸಲ್ಲಿಸುವುದು.? ಬೇಕಾಗುವ ದಾಖಲೆಗಳೇನು.?
- Pension Scheme : ಈ ಸರ್ಕಾರಿ ಯೋಜನೆಯಡಿ ಹೂಡಿಕೆ ಮಾಡಿದ್ರೆ ಸಿಗಲಿದೆ ಪ್ರತಿ ತಿಂಗಳು ₹5,000/- ರೂಪಾಯಿ ಪಿಂಚಣಿ.! ಸಂಪೂರ್ಣ ಮಾಹಿತಿ
- Anugraha Scheme : ಅನುಗ್ರಹ ಯೋಜನೆಯಡಿ ಪ್ರತಿ ಮೇಕೆಗೆ ₹5,000/- ರೂಪಾಯಿ ಪರಿಹಾರ.! ಬೇಕಾಗುವ ದಾಖಲೆಗಳೇನು.?
- Post Office : ಪೋಸ್ಟ್ ಆಫೀಸ್ ಗ್ರಾಹಕರಿಗೆ ಸಿಹಿಸುದ್ಧಿ.! ಇನ್ಮುಂದೆ ಆ ಟೆನ್ಷನ್ ಇರೋದಿಲ್ಲ! ಸಂಪೂರ್ಣ ಮಾಹಿತಿ
- ದಿನ ಭವಿಷ್ಯ (08-08-2026) ಯಾವ ರಾಶಿಗೆ ಶುಭ..? ಯಾರಿಗೆ ಅಶುಭ..?
- Loan Scheme For Business : ಸ್ವಂತ ಬ್ಯುಸಿನೆಸ್ ಶುರು ಮಾಡುವುದಕ್ಕೆ 2 ಲಕ್ಷದವರೆಗೂ ಸಿಗಲಿದೆ ಸಾಲ! ಇಂದೇ ಅರ್ಜಿ ಸಲ್ಲಿಸಿ
- State Bank Updates : ಸ್ಟೇಟ್ ಬ್ಯಾಂಕಿನಲ್ಲಿ ಅತಿ ಹೆಚ್ಚು ಬಡ್ಡಿ ನೀಡುವ ಎಫ್ಡಿ ಯೋಜನೆ ಶುರು! ಸಂಪೂರ್ಣ ಮಾಹಿತಿ ಇಲ್ಲಿದೆ
- Post Office Scheme : ಅಂಚೆ ಇಲಾಖೆಯ ಈ ಯೋಜನೆಯಡಿ ರಿಸ್ಕ್ ಇಲ್ಲದೇ 12 ಲಕ್ಷ ರೂ. ಗಳಿಸಿ.!
- PM Shram Yogi Mandhan : ರೈತರಿಗೆ ಸಿಹಿಸುದ್ಧಿ.! ಈ ಯೋಜನೆಯಡಿ ಕೇಂದ್ರದಿಂದ ಸಿಗಲಿದೆ ಪ್ರತೀ ತಿಂಗಳು ₹3,000/- ರೂಪಾಯಿ ಪಿಂಚಣಿ – ಸಂಪೂರ್ಣ ಮಾಹಿತಿ
- Subsidy Scheme : ಕೇಂದ್ರ ಸರ್ಕಾರದ ಈ ಯೋಜನೆಗಳಡಿ ಮಹಿಳೆಯರಿಗೆ ಕಡಿಮೆ ಬಡ್ಡಿದರದಲ್ಲಿ ಸಿಗಲಿವೆ ಸಾಲ ಸೌಲಭ್ಯಗಳು.!
- SBI ಬ್ಯಾಂಕ್ ನಲ್ಲಿ ಖಾತೆ ಇದ್ದರೆ ತಿಂಗಳಿಗೆ ಮನೆಯಲ್ಲೇ ಕಳಿತು 30 ರಿಂದ 50 ಸಾವಿರ ಹಣ ಗಳಿಸುವ ಸುವರ್ಣಾವಕಾಶ.!
- 10 ಲಕ್ಷದವರೆಗೂ ಸಾಲ ಪಡೆದುಕೊಳ್ಳುವ ಭಾಗ್ಯ..! ಮುದ್ರಾ ಯೋಜನೆಯಲ್ಲಿ ನೀವು ಸ್ವಂತ ಉದ್ಯೋಗಕ್ಕಾಗಿ ಸಾಲ ಪಡೆದುಕೊಳ್ಳಿ.!
- Dina bhavishya : ಇಂದಿನ 12 ರಾಶಿಗಳ ಭವಿಷ್ಯ : ಅದೃಷ್ಟ, ಹಣ, ಆರೋಗ್ಯದ ಸಂಪೂರ್ಣ ಮಾಹಿತಿ
- ಮದುವೆ ಮಾಡಿಕೊಟ್ಟ ಬಳಿಕ ಎಷ್ಟು ವರ್ಷದೊಳಗೆ ಹೆಣ್ಣು ಆಸ್ತಿ ಕೇಳಬಹುದು.? ಇಲ್ಲಿದೆ ಹೊಸ ಬದಲಾವಣೆ – Property Rules


























