Rain Updates : ಇಡೀ ರಾಜ್ಯದ್ಯಂತ ಇಂದು ರಾತ್ರಿ 10 ಗಂಟೆಯಿಂದ ಭಯಂಕರ ಬಿರುಗಾಳಿ ಸಹಿತ ರಣಮಳೆ! 16 ಜಿಲ್ಲೆ 3ದಿನ ಮಳೆ!

Rain Updates : ನಮಸ್ಕಾರ ಸ್ನೇಹಿತರೇ, 5 ದಿನ ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆ. ಹೌದು, ಒಂದು ದಿನ ಭಾರಿ ಬಿಸಿಲು ಮತ್ತೊಂದು ದಿನ ಭಾರಿ ಮಳೆ. ಸದ್ಯ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದೇ ಪರಿಸ್ಥಿತಿ ಇದೆ. ಬೆಂಗಳೂರಿನಲ್ಲಿ ಒಂದು ದಿನ ಉತ್ತಮ ಮಳೆಯಾದರೆ ಮತ್ತೆ ಆಗಲೇ ಬಿಸಿಲು ಹೆಚ್ಚಾಗಿತ್ತು. ಆದರೆ ಮುಂದಿನ 5 ದಿನ ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗುವ ಸಾಧ್ಯತೆ ಇದೆ.

ಮೇ 10 ರಿಂದ ಮೇ 13 ರವರೆಗೆ ರಾಜ್ಯದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ಹೇಳಿದೆ. ಮೇ 10 ರಂದು ಕರಾವಳಿ ಭಾಗದಲ್ಲಿ ಗುಡುಗು ಮಿಂಚಿನೊಂದಿಗೆ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆಗಳಲ್ಲಿ ಶಾಖ ಹೆಚ್ಚಿರಲಿದೆ ಎಂದು ಹೇಳಿದೆ.

ಇದನ್ನೂ ಕೂಡ ಓದಿ : Karnataka SSLC Result 2024 : ನಾಳೆ ಬೆಳಿಗ್ಗೆ 10:30ಕ್ಕೆ ಎಸ್‌ಎಸ್‌ಎಲ್ಸಿ ಫಲಿತಾಂಶ ಪ್ರಕಟ.! ಈ ಡೈರೆಕ್ಟ್ ಲಿಂಕ್ ಮೂಲಕ ರಿಸಲ್ಟ್ ಚೆಕ್ ಮಾಡಿ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಮಿಂಚಿನೊಂದಿಗೆ ಮಳೆ ಆಗಲಿದೆ ಹವಾಮಾನ ಇಲಾಖೆ ತಿಳಿಸಿದೆ. ಮೇ 13 ರವರೆಗೆ ರಾಜ್ಯದಲ್ಲಿ ಸತತವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ(India Meteorological Department) ಮುನ್ಸೂಚನೆ ತಿಳಿಸಿದೆ. ಹಳೆ ಮೈಸೂರು ಭಾಗದಲ್ಲಿ ಭಾರಿ ಮಳೆಯ ನಿರೀಕ್ಷೆ ಮಾಡಲಾಗಿದೆ. ಬೆಂಗಳೂರಿಗೆ ಮೇ 6 ರಂದು ಉತ್ತಮ ಮಳೆಯಾಗಿತ್ತು. ಮೇ 10 ರಂದು ನಗರದಲ್ಲಿ ಗುಡುಗು ಮಿಂಚಿನೊಂದಿಗೆ ವ್ಯಾಪಕ ಮಳೆಯಾಗುವ ಮುನ್ಸೂಚನೆ ಇದೆ.

ಯಾವ ಜಿಲ್ಲೆಗಳಿಗೆ ಮಳೆ ಮೇ 10 ರಂದು ಶುಕ್ರವಾರ ಮೈಸೂರು, ಮಂಡ್ಯ, ಕೋಲಾರ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹುಬ್ಬಳ್ಳಿ, ಬೆಳಗಾವಿ, ದಕ್ಷಿಣ ಕನ್ನಡ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಿಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ(India Meteorological Department) ಹೇಳಿದೆ.

ಇದನ್ನೂ ಕೂಡ ಓದಿ : Crop Insurance : ನಿಮಗೆ ಬೆಳೆ ಪರಿಹಾರ ಸಿಕಿದ್ಯಾ.? ಆಧಾರ್ ಕಾರ್ಡ್, ಮೊಬೈಲ್ ನಂಬ‌ರ್ ಹಾಕಿ ಬೆಳೆ ವಿಮೆ ಸ್ಟೇಟಸ್ ಚೆಕ್ ಮಾಡಿ

ಮೇ 10 ರಿಂದ 13 ರವರೆಗೆ ಮಳೆ ಬಿರುಸು ಪಡೆಯಲಿದ್ದು, ಶಿವಮೊಗ್ಗ, ದಾವಣಗೆರೆ, ಕಲಬುರ್ಗಿ, ಬೀದರ್, ಬಳ್ಳಾರಿ, ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಮಂಡ್ಯ, ತುಮಕೂರು, ಕೋಲಾರ, ರಾಮನಗರ ಮತ್ತು ಚಿತ್ರದುರ್ಗ ಸೇರಿದಂತೆ ಬಹುತೇಕ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಮೇ ಹದಿಮೂರರವರೆಗೆ ರಾಜ್ಯದಲ್ಲಿ ಉತ್ತಮ ಮಳೆ ಮುಂದುವರೆಯಲಿದೆ ಎನ್ನುವ ಮಾಹಿತಿಯನ್ನ ಹವಾಮಾನ ಇಲಾಖೆ(India Meteorological Department) ನೀಡಿದೆ.

ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.

Leave a Reply