Ration Card Update : ನಮಸ್ಕಾರ ಸ್ನೇಹಿತರೇ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಸರ್ಕಾರದ ವಿವಿಧ ಸೌಲಭ್ಯದ ಜೊತೆಗೆ ಸಬ್ಸಿಡಿ ದರದಲ್ಲಿ ಆಹಾರ ಧಾನ್ಯ ಪಡೆಯಲು ಇದೀಗ ಪಡಿತರ ಚೀಟಿಯು ಪ್ರತಿಯೊಬ್ಬ ಫಲಾನುಭವಿಗಳಿಗೆ ಕಡ್ಡಾಯವಾಗಿದೆ. ಅದಲ್ಲದೇ ವಾಸಸ್ಥಳ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ, ಪಾನ್ ಕಾರ್ಡ್, ಚಾಲಕರ ಪರವಾನಗಿ ಸೇರಿದಂತೆ ಅಗತ್ಯ ದಾಖಲೆಗಳಿಗಾಗಿ ಅರ್ಜಿ ಸಲ್ಲಿಸುವಾಗ ರೇಷನ್ ಕಾರ್ಡ್ ನ್ನು ಗುರುತಿನ ಪುರಾವೆಯಾಗಿ ಬಳಸಲಾಗುತ್ತದೆ.
ಆದರೆ ಕಾರಣಾಂತರಗಳಿಂದ ಕೆಲವು ತಿಂಗಳಿಂದ ಪಡಿತರ ಚೀಟಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿತ್ತು. ಇದೇ ತಿಂಗಳು ಇದು ಪುನರಾರಂಭಗೊಳ್ಳಲಿದ್ದು, ರೇಷನ್ ಕಾರ್ಡ್ ಗಾಗಿ ಕಾದು ಕುಳಿತಿರುವವರು ಆನ್ ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ಈ ಲೇಖನದಲ್ಲಿ ನಿಮಗೆ ನೀಡಲಾಗಿದೆ.
ಇದನ್ನೂ ಕೂಡ ಓದಿ : Bara Parihara Amount Status Check : ಇನ್ನೂ ನಿಮಗೆ ಬೆಳೆ ಪರಿಹಾರ ಹಣ ಬಾರದಿದ್ದರೆ ಈ 1 ಕೆಲಸ ಮಾಡಿ 5 ನಿಮಿಷದಲ್ಲಿ ಹಣ ನಿಮ್ಮ ಖಾತೆಗೆ ಜಮೆ
ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳೇನು.?
(ಗ್ರಾಮಾಂತರ ಪ್ರದೇಶದವರಿಗೆ)
- ನಿಮ್ಮ ಗ್ರಾಮ ಪಂಚಾಯಿತಿಯ ಹೆಸರು
- ಈಗ ವಾಸ ಮಾಡುತ್ತಿರುವ ಮನೆ ವಿಳಾಸ
- ಮನೆಯ ಆಸ್ತಿ ಸಂಖ್ಯೆ ವಿವರ
- ಮನೆಯ ವಿದ್ಯುತ್ ಸಂಪರ್ಕದ ಬಿಲ್ ಪ್ರತಿ
- ಕುಟುಂಬದ ಎಲ್ಲ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ ನಮೂದಿಸಬೇಕು.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆನ್ನುವ ಬಗ್ಗೆ ಮಾಹಿತಿ.
- ನಿಮ್ಮ ಕುಟುಂಬಕ್ಕಿರುವ ಅಡುಗೆ ಅನಿಲದ(Gas) ಸರಬರಾಜಿನ ಇತ್ತಿಚಿನ ಬಿಲ್/ರಶೀದಿ.
ಇದನ್ನೂ ಕೂಡ ಓದಿ : Labour Card Scholarship : ಕಾರ್ಮಿಕ ಇಲಾಖೆ ವತಿಯಿಂದ ವಿದ್ಯಾರ್ಥಿ ವೇತನ – ಅರ್ಜಿ ಹೇಗೆ ಸಲ್ಲಿಸುವುದು.?
(ನಗರ / ಪಟ್ಟಣ ಪ್ರದೇಶದವರಿಗೆ) :-
- ನೀವು ವಾಸವಿರುವ ನಗರಸಭೆ / ಪುರಸಭೆ / ನಗರ ಪಾಲಿಕೆಯ ವಾರ್ಡ್ ಸಂಖ್ಯೆ
- ಬೆಂಗಳೂರು ಅನೌಪಚಾರಿಕ ಪಡಿತರ ಪ್ರದೇಶದವರಾಗಿದ್ದಲ್ಲಿ (ಬಿಬಿಎಂಪಿ ಪ್ರದೇಶ) ನೀವು ಆಹಾರ ಇಲಾಖೆಯ ಯಾವ ವಲಯ ವ್ಯಾಪ್ತಿಯಲ್ಲಿದ್ದೀರಿ ಎಂಬ ಬಗ್ಗೆ ಮಾಹಿತಿ.
- ನಿಮ್ಮ ಮನೆಯ ವಿದ್ಯುತ್ ಬಿಲ್
- ನಿಮ್ಮ ನಿವಾಸದ ಪೂರ್ಣ ವಿಳಾಸ (ಅಂಚೆ ಪಿನ್ ಕೋಡ್ ಕಡ್ಡಾಯ). ಸ್ವಂತ ಮನೆಯಾಗಿದ್ದಲ್ಲಿ ಮನೆಯ ಆಸ್ತಿ ಸಂಖ್ಯೆ ವಿವರ, ನಿಮ್ಮ ಮನೆ ವಿಳಾಸ ಹುಡುಕಲು ಸುಲಭವಾಗುವ ಹತ್ತಿರದ ಸ್ಥಳದ ಗುರುತು
- ಕುಟುಂಬದ ಸದಸ್ಯರ ಹೆಸರು, ಸದಸ್ಯರು, ಮುಖ್ಯಸ್ಥರು/ಅರ್ಜಿದಾರರೊಂದಿಗೆ ಹೊಂದಿರುವ ಸಂಬಂಧ, ಕುಟುಂಬ ಸದಸ್ಯರೆಲ್ಲರ ಹುಟ್ಟಿದ ದಿನಾಂಕ, ವೃತ್ತಿ ಮತ್ತು ಅವರ ವಾರ್ಷಿಕ ವರಮಾನ.
- ಈಗಿರುವ ಮನೆಯಲ್ಲಿ ಎಷ್ಟು ಸಮಯದಿಂದ ವಾಸವಾಗಿದ್ದಾರೆಂಬ ಮಾಹಿತಿ.
- ನಿಮ್ಮ ಸಂಪರ್ಕದ ಮೊಬೈಲ್ ನಂಬರ್ (ಕಡ್ಡಾಯ), ಸ್ವಂತ ಮೊಬೈಲ್ ಇಲ್ಲದಿದ್ದರೂ ನಿಮ್ಮನ್ನು ಸಂಪರ್ಕಿಸಬಹುದಾದ ಯಾವುದಾದರೂ ಮೊಬೈಲ್ ಸಂಖ್ಯೆಯನ್ನು ನೀಡುವುದು.
- ಅರ್ಜಿದಾರರು ಅವಿವಾಹಿತರಾಗಿದ್ದಲ್ಲಿ ಅವರ ಪೋಷಕರಿರುವ ಪೂರ್ಣ ವಿಳಾಸ.
- ನಿಮ್ಮ ಕುಟುಂಬದ ಅಡುಗೆ ಅನಿಲ ಸಂಪರ್ಕದ ವಿವರ/ಇತ್ತೀಚಿನ ಎಲ್.ಪಿ.ಜಿ. ಬಿಲ್ ಪ್ರತಿ
ಪಡಿತರ ಚೀಟಿಗೆ ಹೇಗೆ ಅರ್ಜಿ ಸಲ್ಲಿಸುವುದು.?
- ರೇಷನ್ ಕಾರ್ಡ್ ಗಾಗಿ ಅರ್ಜಿ ಸಲ್ಲಿಸಬೇಕಿದ್ದರೆ ನೀವು ಆಹಾರ ಇಲಾಖೆಯ ವೆಬ್ಸೈಟ್ಗೆ ಭೇಟಿ ನೀಡಿ. (https://ahara.kar.nic.in/)
- ಇ-ಸರ್ವಿಸ್ (ಇ-ಸೇವೆ) ಮೇಲೆ ಕ್ಲಿಕ್ ಮಾಡಿ.
- ಇದರಲ್ಲಿ ಕೆಳಗಡೆ ನಿಮಗೆ ಇ-ಪಡಿತರ ಚೀಟಿ ಆಯ್ಕೆ ಕಾಣುತ್ತದೆ.
- ಅದರಲ್ಲಿ ಕೆಳಗಿನ ಬಾಣದ ಗುರುತಿನ ಮೇಲೆ ಕ್ಲಿಕ್ ಮಾಡಿದರೆ ಹೊಸ ಪಡಿತರ ಚೀಟಿ ಎಂಬ ಆಯ್ಕೆ ತೋರಿಸುತ್ತದೆ.
- ಅಲ್ಲಿ ಎಪಿಎಲ್(apl) ಹಾಗೂ ಬಿಪಿಎಲ್(bpl) ಆಯ್ಕೆ ಇರುತ್ತದೆ. ಅದರ ಮೇಲೆ ಕ್ಲಿಕ್ ಮಾಡಿದ ಬಳಿಕ ಅಗತ್ಯ ದಾಖಲೆಗಳನ್ನು ನೀವು ಸಲ್ಲಿಸಬೇಕಾಗುತ್ತದೆ.
| ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ | Application for Ration Card |
ಇದನ್ನೂ ಕೂಡ ಓದಿ : HSRP : ಮೇ 31 ರಿಂದ ಎಲ್ಲಾ ವಾಹನಸವಾರರಿಗೆ ಬಿಗ್ ಶಾಕಿಂಗ್ ನ್ಯೂಸ್ / HSRP ನಂಬರ್ ಪ್ಲೇಟ್ ₹1,000 ದಂಡ ಘೋಷಣೆ.!
ಇದೇ ರೀತಿಯ ಹೊಸ ಹೊಸ ಮಾಹಿತಿಗಳು ತಿಳಿಯಲು, ವಿದ್ಯಾರ್ಥಿವೇತನಗಳು, ಸರ್ಕಾರಿ ಯೋಜನೆಗಳು, ಸರ್ಕಾರಿ ಕೆಲಸಗಳು ಹಾಗೂ ಖಾಸಗಿ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಮ್ಮ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ನಮ್ಮ Telegram & Whatsapp ಗ್ರೂಪ್ ಗಳಿಗೆ ಜಾಯಿನ್ ಆಗಿ ದಿನನಿತ್ಯ ನಡೆಯುವ ಪ್ರಚಲಿತ ಘಟನೆಗಳ ಬಗ್ಗೆ ಮಾಹಿತಿ ತಿಳಿದುಕೊಳ್ಳಿ.
ಇನ್ನೂ ಹೆಚ್ಚಿನ ನ್ಯೂಸ್ ಅಪ್ಡೇಟ್ ಗಳಿಗಾಗಿ ‘ಕನ್ನಡ ನ್ಯೂಸ್ ಟೈಮ್’ ಲೈಕ್ ಮತ್ತು ಶೇರ್ ಮಾಡುವುದನ್ನ ಮರೆಯಬೇಡಿ.
- ಆರೆಸ್ಸೆಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ; ಪ್ರಿಯಾಂಕ್ ಖರ್ಗೆ ವಿರುದ್ಧ ಮಾನಹಾನಿ ಪ್ರಕರಣ ದಾಖಲಿಸಲು ಕೋರ್ಟ್ ಆದೇಶ
- ಕೇವಲ 40 ನಿಮಿಷದಲ್ಲೇ ಕೂದಲು ಉದುರುವ ಸಮಸ್ಯೆಗೆ ಮುಕ್ತಿ ನೀಡುತ್ತೆ ಈ ಎಲೆ..! ಇಂದೇ ಟ್ರೈ ಮಾಡಿ
- ವಾರಕ್ಕೊಮ್ಮೆ ಅಥವಾ ತಿಂಗಳಿಗೆ ಒಂದೆರಡು ಬಾರಿ ಡ್ರಿಂಕ್ಸ್ ಮಾಡಿದರೂ, ಲಿವರ್ ಗೆ ಸಮಸ್ಯೆ ಆಗುತ್ತಾ.?
- ಯಾರ ಮನೆ ಬಾಗಿಲಿಗೆ ಯಾರು ಹೋಗಿದ್ದರು ಎಂಬುದು ನನಗೂ ಗೊತ್ತು: ಎಚ್ಡಿಕೆ ಹೇಳಿಕೆಗೆ ಪ್ರಿಯಾಂಕ್ ಖರ್ಗೆ ತಿರುಗೇಟು!
- ‘ವಿಜಯೇಂದ್ರನನ್ನು ಒದ್ದು ಬಿಸಾಕಿ’ ಸದಾನಂದ ಗೌಡರದ್ದು ಎನ್ನಲಾದ ಆಡಿಯೋ ಲೀಕ್, ನೋ ಕಮೆಂಟ್ಸ್ ಎಂದ ಡಿವಿಎಸ್!!
- ತೆರಿಗೆ ಹಣಕ್ಕಿಂತ ಜನರ ಆರೋಗ್ಯವೇ ಮುಖ್ಯ: ಕರ್ನಾಟಕದಲ್ಲಿ ಗುಟ್ಕಾ ಮತ್ತು ಪಾನ್ ಮಸಾಲ ನಿಷೇಧ- ಮುಕ್ತ ಕರ್ನಾಟಕಕ್ಕೆ ಡಿ.ಕೆ. ಶಿವಕುಮಾರ್ ಖಡಕ್ ನಿರ್ಧಾರ
- ‘ನಮ್ಮ ರಾಜಕೀಯ ಮುಗಿಯಿತು.. ಚುನಾವಣಾ ರಾಜಕೀಯದ ಅಂತ್ಯದ ಬಗ್ಗೆ ಮೈಸೂರಲ್ಲಿ ಮುನ್ಸೂಚನೆ ನೀಡಿದ್ರಾ ಮಾಜಿ ಸಿಎಂ ಸಿದ್ದರಾಮಯ್ಯ!
- ಹೋಟೆಲ್ನಲ್ಲಿ ಕೊನೆಯ ಊಟ ಮಾಡಿ ನದಿಗೆ ಹಾರಿದ ದಂಪತಿ, ಇಬ್ಬರು ಮಕ್ಕಳು; ಬಡತನ ತಾಳಲಾರದೆ ಒಂದೇ ಕುಟುಂಬದ ನಾಲ್ವರ ಸಾಮೂಹಿಕ ಆತ್ಮಹತ್ಯೆ!
- ಗರ್ಭದಲ್ಲಿರೋ ಮಗುವಿಗೆ DNA ಟೆಸ್ಟ್ ಮಾಡಿಸಲು ಗಂಡನ ಪಟ್ಟು; ಮನನೊಂದು 23 ವರ್ಷದ ಗರ್ಭಿಣಿ ಆತ್ಮಹತ್ಯೆ!
- 10 ಕೆಜಿ ತೂಕ ಇಳಿಸಿಕೊಳ್ಳಲು ಜೀರಿಗೆ ನೀರನ್ನ ಎಷ್ಟು ದಿನಗಳವರೆಗೆ ಕುಡಿಯಬೇಕು.?
- ರಕ್ತದಲ್ಲಿ ಯೂರಿಕ್ ಆಸಿಡ್ ಹೆಚ್ಚಾದರೆ ಕಿಡ್ನಿ ಹಾಗೂ ಮೂಳೆಗಳಿಗೆ ಹಾನಿ ಜಾಸ್ತಿಯಂತೆ!
- ದೇಶದಲ್ಲಿ ಒಮ್ಮೆ ಪ್ರಜಾಪ್ರಭುತ್ವ ಹೋದರೆ ಮತ್ತೆ ಗುಲಾಮಗಿರಿ ಬರುತ್ತದೆ ಎಚ್ಚರ! SIR ಪರಿಣಾಮ ಏನೆಂದು ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳದ ಫಲಿತಾಂಶದಲ್ಲಿದೆ: ಮಾಜಿ ಸಿಎಂ ಸಿದ್ದರಾಮಯ್ಯ
- ಕಾರಿನಲ್ಲಿ ನಾಡಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಸ್ಪೋಟಕ ವಿಚಾರ ಬಿಚ್ಚಿಟ್ಟ ಸಂತ್ರಸ್ತೆ.!
- ಹರ್ನಿಯಾ : ಹೊಟ್ಟೆ ಭಾಗದಲ್ಲಿ ನೋವು, ತೊಡೆಸಂಧಿಯ ಉಬ್ಬು, ಹರ್ನಿಯಾ ನಡುವಿನ ವ್ಯತ್ಯಾಸ ತಿಳಿಯಿರಿ
- ಟೊಮೆಟೋ ತಿಂದರೆ ಕಿಡ್ನಿ ಸ್ಟೋನ್ ಆಗುತ್ತಾ? ವೈದ್ಯರೇ ಬಿಚ್ಚಿಟ್ಟ ಸತ್ಯವಿದು..
- ಹೆಣ್ಣಿಗೆ ಮಿಲನದಲ್ಲಿ ಸಂಪೂರ್ಣ ತೃಪ್ತಿ ಸಿಗದೇ ಇದ್ದರೆ, ಆಕೆಯ ಮೇಲಾಗುವ 6 ಆಶ್ಚರ್ಯಕರ ಪರಿಣಾಮಗಳು | Health Tips
- ಅಂಬಾನಿ ನೀಡಿದ ₹900 ಕೋಟಿ ದೇಣಿಗೆಯ ಲೆಕ್ಕ ನೀಡಿ: ರಾಮಮಂದಿರ ಟ್ರಸ್ಟ್ʼಗೆ ಬಿ.ಕೆ. ಹರಿಪ್ರಸಾದ್ ಪ್ರಶ್ನೆ
- ಭಾಮೈದುನ ಮೇಲಿನ ದಾಳಿ ಸತ್ಯಾಂಶ ತಿಳಿಯಲು 6 ತಿಂಗಳು ಬೇಕು : ಸಚಿವ ಸತೀಶ್ ಜಾರಕಿಹೊಳಿ
- ಭೂತಾಯಿ ಬಾಯಿಬಿಡಲಿದ್ದಾಳೆ ಅಗ್ನಿ ಅವಘಡ ಹೆಚ್ಚಲಿದೆ : ನಡುಕ ಹುಟ್ಟಿಸುತ್ತಿದೆ ಕೋಡಿಶ್ರೀಗಳ ಭೀಕರ ಭವಿಷ್ಯ
- ಮಗುವಿನ ಅಳುವಿಗೆ ಬೇಸತ್ತು ಕತ್ತು ಸೀಳಿ ಹೆತ್ತ ಕಂದನನ್ನೇ ಹತ್ಯೆಗೈದ ತಾಯಿ! ಬಳಿಕ ತನ್ನ ಗಂಟಲು ಸೀಳಿ ಆತ್ಮಹತ್ಯೆಗೆ ಯತ್ನ



















