ಕೋವಿಡ್ – 19 ತಾಂಡವವಾಡುತ್ತಿದ್ದಾಗ 10ಕ್ಕೂ ಹೆಚ್ಚು ಶವಸಂಸ್ಕಾರ ಮಾಡಿದ್ದ ಸಮಾಜ ಸೇವಕ ನಿಶಾದ್ ಅಹಮ್ಮದ್ (35) (Social worker Nishad) ಹೃದಯಾಘಾತದಿಂದ (Heart Attack) ಮೃತಪಟ್ಟಿದ್ದಾರೆ.
ನಿಶಾದ್, ಬೇಲೂರು ಪಟ್ಟಣದಲ್ಲಿ ಟೀ ಕ್ಯಾಂಟೀನ್ ನಡೆಸುತ್ತಿದ್ದರು. ಶನಿವಾರ ರಾತ್ರಿ ಅವರಿಗೆ ವಾಂತಿಯಾಗಿದೆ. ಕೂಡಲೇ ಹಾಸನದ ಆಸ್ಪತ್ರೆಗೆ ಹೋಗಿ ಬಂದಿದ್ದರು. ಬಳಿಕ ಮನೆಯಲ್ಲಿ ಮಾತ್ರೆ ನುಂಗಿ ಮಲಗಿದ್ದ ವೇಳೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.
ನಿಶಾದ್ ಹಲವು ಅನಾಥ ಶವಗಳಿಗೆ ಮುಕ್ತಿ ನೀಡಿದ್ದಾರೆ. ಜೊತೆಗೆ ಅಪಘಾತ ಸಂದರ್ಭದಲ್ಲಿ ತುರ್ತಾಗಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದರು. ಅವರ ಸಾವಿಗೆ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.
ಹಾಸನ (Hassan) ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.
WhatsApp Group
Join Now