ಅಕ್ರಮ ಕ್ಲಿನಿಕ್ (Illegal clinic) ಹೊಂದಿದ್ದ ವ್ಯಕ್ತಿಯೊಬ್ಬ ತನ್ನ ಸೋದರಳಿಯನ ಜತೆ ಸೇರಿ ಮಹಿಳೆಯೊಬ್ಬಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದಾರೆ. ಯೂಟ್ಯೂಬ್ ವಿಡಿಯೊ ಟ್ಯುಟೋರಿಯಲ್ ನೋಡಿ ಸರ್ಜರಿ ಮಾಡಿದ ಪರಿಣಾಮ ಮಹಿಳೆ ಮೃತಪಟ್ಟಿದ್ದಾಳೆ. ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಈ ಆಘಾತಕಾರಿ ಘಟನೆ ನಡೆದಿದೆ.
ಅಕ್ರಮವಾಗಿ ಕ್ಲಿನಿಕ್ ನಡೆಸುತ್ತಿದ್ದ ಆರೋಪಿಗಳು ಯಾವುದೇ ವೈದ್ಯಕೀಯ ಅರ್ಹತೆ ಇಲ್ಲದಿದ್ದರೂ ಶಸ್ತ್ರಚಿಕಿತ್ಸೆಗೆ ನಡೆಸಿದ್ದಾರೆ ಪೊಲೀಸರು ತಿಳಿಸಿದ್ದಾರೆ.
ತೆಹಬಹಾದೂರ್ ರಾವತ್ ಎಂಬುವವರ ಪತ್ನಿ ಮುನಿಶ್ರಾ ರಾವತ್ ಕಿಡ್ನಿ ಸ್ಟೋನ್ಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿದ್ದರು. ಡಿಸೆಂಬರ್ 5ರಂದು ಅವರ ಪತಿ ಅವರನ್ನು ಕೋಠಿಯಲ್ಲಿರುವ ಶ್ರೀ ದಾಮೋದರ್ ಔಷಧಾಲಯಕ್ಕೆ ಕರೆದೊಯ್ದರು. ಅಲ್ಲಿ ಕ್ಲಿನಿಕ್ ಆಪರೇಟರ್ ಜ್ಞಾನ್ ಪ್ರಕಾಶ್ ಮಿಶ್ರಾ ಹೊಟ್ಟೆಯಲ್ಲಿ ನೋವು ಕಲ್ಲುಗಳಿಂದ ಉಂಟಾಗಿದೆ ಎಂದು ಹೇಳಿ ಶಸ್ತ್ರಚಿಕಿತ್ಸೆಗೆ ಸಲಹೆ ನೀಡಿದ ಎನ್ನಲಾಗಿದೆ.
ಲಿವರ್ ಡ್ಯಾಮೇಜ್ಗೆ ಫುಲ್ ಸ್ಟಾಪ್: ಇಂದೇ ನಿಮ್ಮ ಆಹಾರದಲ್ಲಿ ಇರಲಿ ಈ ‘ದೇಹ ಶುದ್ಧೀಕರಿಸುವ’ ಆಹಾರಗಳು!
ಈ ಶಸ್ತ್ರಚಿಕಿತ್ಸೆಗೆ 25,000 ರೂ. ವೆಚ್ಚವಾಗುತ್ತದೆ ಎಂದು ಅವರು ಹೇಳಿದ್ದಾನೆ. ಶಸ್ತ್ರಚಿಕಿತ್ಸೆಗೆ ಮುನ್ನ ಪತಿ 20,000 ರೂ. ಠೇವಣಿ ಇಟ್ಟಿದ್ದರು. ಮದ್ಯ ಕುಡಿದಿದ್ದ ಮಿಶ್ರಾ ಯೂಟ್ಯೂಬ್ ವಿಡಿಯೊ ನೋಡಿ ಶಸ್ತ್ರಚಿಕಿತ್ಸೆ ಆರಂಭಿಸಿದ ಎಂದು ಪತಿ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಮಿಶ್ರಾ, ತನ್ನ ಪತ್ನಿಯ ಹೊಟ್ಟೆಯನ್ನು ಕೊಯ್ದು, ಹಲವು ರಕ್ತನಾಳಗಳನ್ನು ಕತ್ತರಿಸಿದ್ದಾನೆ. ತೀವ್ರ ರಕ್ತಸ್ರಾವದಿಂದ ಡಿಸೆಂಬರ್ 6ರಂದು ಸಂಜೆ ಪತ್ನಿ ಮೃತಪಟ್ಟಿದ್ದಾಗಿ ಅವರು ಹೇಳಿದ್ದಾರೆ.
ಮಿಶ್ರಾ ಸೋದರಳಿಯ ವಿವೇಕ್ ಕುಮಾರ್ ಮಿಶ್ರಾ ಶಸ್ತ್ರಚಿಕಿತ್ಸೆಯ ಸಮಯದಲ್ಲಿ ಸಹಾಯ ಮಾಡಿದ್ದ. ಸೋದರಳಿಯ ರಾಯ್ಬರೇಲಿಯ ಆಯುರ್ವೇದ ಆಸ್ಪತ್ರೆಯಲ್ಲಿ ಉದ್ಯೋಗಿಯಾಗಿದ್ದು, ಸರ್ಕಾರಿ ಕೆಲಸದ ನೆಪದಲ್ಲಿ ಅಕ್ರಮ ಕ್ಲಿನಿಕ್ ಅನ್ನು ಹಲವು ವರ್ಷಗಳಿಂದ ನಡೆಸಲಾಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ನಿರ್ಲಕ್ಷ್ಯದಿಂದ ಸಾವಿಗೆ ಕಾರಣವಾದ ಆರೋಪದ ಮೇಲೆ ಕ್ಲಿನಿಕ್ ಆಪರೇಟರ್ ಮತ್ತು ಆತನ ಸೋದರಳಿಯನ ವಿರುದ್ಧ ಎಸ್ಸಿ/ಎಸ್ಟಿ (ದೌರ್ಜನ್ಯ ತಡೆ) ಕಾಯ್ದೆ, 1989ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಿವೆಡ್ಡಿಂಗ್ ಶೂಟ್ ಮುಗಿಸಿ ಬರುವಾಗ ಬೈಕ್ ಗೆ ಲಾರಿ ಡಿಕ್ಕಿ : ಕೆಲವೇ ದಿನಗಳಲ್ಲಿ ಹಸೆಮಣೆ ಏರಬೇಕಿದ್ದ ಜೋಡಿ ಸಾವು!
ಪ್ರತ್ಯೇಕ ಘಟನೆ :- ಅಡುಗೆ ವಿಚಾರದಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ
ಜಾರ್ಖಂಡ್ನ ಪೂರ್ವ ಸಿಂಗ್ಭೂಮ್ ಜಿಲ್ಲೆಯಲ್ಲಿ ಭಯಾನಕ ಘಟನೆಯೊಂದು ಬೆಳಕಿಗೆ ಬಂದಿದೆ. ಅಡುಗೆ ಮಾಡುವ ವಿಚಾರದಲ್ಲಿ ಉಂಟಾದ ಸಣ್ಣ ಜಗಳದಲ್ಲಿ ಕೊಲೆಯಲ್ಲಿ ಅಂತ್ಯವಾಗಿದೆ. ಪತಿಯೊಬ್ಬ ಪತ್ನಿಯ ಕತ್ತು ಹಿಸುಕಿ ಕೊಂದಿದ್ದಾನೆ. ಪತ್ನಿಯನ್ನು ಕೊಂದ ನಂತರ ಆರೋಪಿ ಪತಿಯು ಆಕೆಯ ಶವವನ್ನು ಪೊದೆಯಲ್ಲಿ ಎಸೆದಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಆರೋಪಿ ಸಂಜಯ್ ಶರ್ಮಾನನ್ನು ಬಂಧಿಸಿದ್ದಾರೆ. ಮೃತಳನ್ನು ನಿಶಾ ಶರ್ಮಾ ಎಂದು ಗುರುತಿಸಲಾಗಿದೆ. ಸೋಮವಾರ ಮುಸಾಬಾನಿ ಪೊಲೀಸ್ ಠಾಣೆ ಪ್ರದೇಶದ ಬೆನಾಸೋಲ್ ಕ್ವಾರ್ಟರ್ಸ್ ಬಳಿಯ ಪೊದೆಗಳಲ್ಲಿ ನಿಶಾ ಶರ್ಮಾ ಶವ ಪತ್ತೆಯಾಗಿತ್ತು.
ಡಿಸೆಂಬರ್ 7ರ ಸಂಜೆ ಸಂಜಯ್ ಶರ್ಮಾ ಮತ್ತು ಅವನ ಪತ್ನಿ ನಿಶಾ ನಡುವೆ ಅಡುಗೆ ಮಾಡುವ ವಿಚಾರದಲ್ಲಿ ಜಗಳ ನಡೆದಿತ್ತು. ಈ ಜಗಳ ತೀವ್ರಗೊಂಡು, ಕೋಪಗೊಂಡ ಸಂಜಯ್, ನಿಶಾಳ ಸೀರೆಯನ್ನು ಬಳಸಿ ಕತ್ತು ಹಿಸುಕಿ ಹತ್ಯೆ ಮಾಡಿದ್ದಾನೆ. ನಂತರ ಸಾಕ್ಷ್ಯ ನಾಶ ಮಾಡಲು ಸೀರೆಯನ್ನು ಸುಟ್ಟು ಶವವನ್ನು ಹತ್ತಿರದ ಪೊದೆಯಲ್ಲಿ ಎಸೆದಿದ್ದಾನೆ.